ವಸುಂದರಾ ದಾಸ್ 
ಸಿನಿಮಾ ಸುದ್ದಿ

ಬೆಂಗಳೂರು: ಗಾಯಕಿ ವಸುಂದರಾ ದಾಸ್ ಗೆ ಕಿರುಕುಳ; ಕ್ಯಾಬ್ ಚಾಲಕನ ವಿರುದ್ಧ ದೂರು ದಾಖಲು

ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್​ 29 ರ ಸಂಜೆ 4.30 ರ ಸುಮಾರಿಗೆ ...

ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್​ 29 ರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ.

ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ವಸುಂಧರಾ ದಾಸ್​ ಹೋಗುತ್ತಿದ್ದಾಗ, ಕ್ಯಾಬ್​ ಚಾಲಕ ಭಾಷ್ಯಂ ಸರ್ಕಲ್ ಸಿಗ್ನಲ್‌ನಿಂದ ಹಿಂಬಾಲಿಸಿಕೊಂಡು ಬಂದಿದ್ದಾನೆ. ಇಟಿಯೋಸ್​ ಕಾರಿನಲ್ಲಿ ಬಂದ ಆತ ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಕಾರು ಅಡ್ಡಗಟ್ಟಿದ್ದಾನೆ. ಬಳಿಕ ಆತ ಕಾರಿನಿಂದ ಇಳಿದು ವಸುಂಧರಾ ದಾಸ್ ಕಾರಿನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದೇ ವೇಳೆ ವಸುಂಧರಾ ದಾಸ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ವಸುಂಧರಾ ದಾಸ್‌ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳಗೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಅಷ್ಟರಲ್ಲಾಗಲೇ ಕ್ಯಾಬ್‌ ಚಾಲಕ ಸ್ಥಳದಿಂದ ತೆರಳಿದ್ದಾನೆ.

ಈ ಬಗ್ಗೆ ವಸುಂಧರಾ ದಾಸ್‌ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಷನ್‌ 509 341, 364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್‌ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?

'ಐರಿಸ್ ಡೆನಾ' ದಾಳಿಗೆ ತಕ್ಕ ಪ್ರತ್ಯುತ್ತರ ನೀಡದೇ ಬಿಡುವುದಿಲ್ಲ: ಇರಾನ್ ಸೇನಾ ಮುಖ್ಯಸ್ಥ

ದೇಶದಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆ: ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು- ಪ್ರಿಯಾಂಕ್ ಖರ್ಗೆ ಕಿಡಿ!

ಇರಾನ್‌ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್

SCROLL FOR NEXT