ವಸುಂದರಾ ದಾಸ್ 
ಸಿನಿಮಾ ಸುದ್ದಿ

ಬೆಂಗಳೂರು: ಗಾಯಕಿ ವಸುಂದರಾ ದಾಸ್ ಗೆ ಕಿರುಕುಳ; ಕ್ಯಾಬ್ ಚಾಲಕನ ವಿರುದ್ಧ ದೂರು ದಾಖಲು

ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್​ 29 ರ ಸಂಜೆ 4.30 ರ ಸುಮಾರಿಗೆ ...

ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್​ 29 ರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ.

ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ವಸುಂಧರಾ ದಾಸ್​ ಹೋಗುತ್ತಿದ್ದಾಗ, ಕ್ಯಾಬ್​ ಚಾಲಕ ಭಾಷ್ಯಂ ಸರ್ಕಲ್ ಸಿಗ್ನಲ್‌ನಿಂದ ಹಿಂಬಾಲಿಸಿಕೊಂಡು ಬಂದಿದ್ದಾನೆ. ಇಟಿಯೋಸ್​ ಕಾರಿನಲ್ಲಿ ಬಂದ ಆತ ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಕಾರು ಅಡ್ಡಗಟ್ಟಿದ್ದಾನೆ. ಬಳಿಕ ಆತ ಕಾರಿನಿಂದ ಇಳಿದು ವಸುಂಧರಾ ದಾಸ್ ಕಾರಿನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದೇ ವೇಳೆ ವಸುಂಧರಾ ದಾಸ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ವಸುಂಧರಾ ದಾಸ್‌ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳಗೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಅಷ್ಟರಲ್ಲಾಗಲೇ ಕ್ಯಾಬ್‌ ಚಾಲಕ ಸ್ಥಳದಿಂದ ತೆರಳಿದ್ದಾನೆ.

ಈ ಬಗ್ಗೆ ವಸುಂಧರಾ ದಾಸ್‌ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಷನ್‌ 509 341, 364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್‌ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT