ಸತತ ಸೋಲುಗಳಿಂದ ಕಂಗೆಟ್ಟು ಆತ್ಮಹತ್ಯೆಗೆ ಚಿಂತಿಸುತ್ತಿದ್ದೆ: ಎಆರ್ ರೆಹಮಾನ್ 
ಸಿನಿಮಾ ಸುದ್ದಿ

ಸೋಲುಗಳಿಂದ ಕಂಗೆಟ್ಟಾಗ ಆತ್ಮಹತ್ಯೆಗೆ ಚಿಂತಿಸುತ್ತಿದ್ದೆ: ಎಆರ್ ರೆಹಮಾನ್

ಖ್ಯಾತ ಸಂಗೀತ ನಿರ್ದೇಶಕ, ಸಂಯೋಜಕ ಎಆರ್ ರೆಹಮಾನ್ ಅವರ ಸಾಧನೆಗಳು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಇಂದು ಅವರೊಬ್ಬ ಖ್ಯಾತ ಸಂಗೀತ ನಿರ್ದೇಶಕನಾಗಿರಬಹುದು ಆದರೆ ಎಳೆಯ ವಯಸ್ಸಿನಲ್ಲೇ ಆತ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುವಷ್ಟು ನೋವು ಎದುರಿಸಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ, ಸಂಯೋಜಕ ಎಆರ್ ರೆಹಮಾನ್ ಅವರ ಸಾಧನೆಗಳು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಇಂದು ಅವರೊಬ್ಬ ಖ್ಯಾತ ಸಂಗೀತ ನಿರ್ದೇಶಕನಾಗಿರಬಹುದು ಆದರೆ ಎಳೆಯ ವಯಸ್ಸಿನಲ್ಲೇ ಆತ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುವಷ್ಟು ನೋವು ಎದುರಿಸಿದ್ದಾರೆ. 
ಹೌದು, ಸ್ವತಃ ಎಆರ್ ರೆಹಮಾನ್ ತಮ್ಮ ಜೀವನದ ಕಷ್ಟದ ದಿನಗಳನ್ನು ಹೇಳಿಕೊಂಡಿದ್ದಾರೆ.  ಎಆರ್ ರೆಹಮಾನ್ ಅವರ ಜೀವನ ಚರಿತ್ರೆಯನ್ನು ಕೃಷ್ಣ ತ್ರಿಲೋಕ್ ದಾಖಲಿಸಿದ್ದು, ಮುಂಬೈ ನಲ್ಲಿ ಪುಸ್ತಕ ಬಿಡುಗಡೆಯಾಗಿದೆ. ಈ ವೇಳೆ ಸಂದರ್ಶನ ನೀಡಿರುವ ಎಆರ್ ರೆಹಮಾನ್, ತಮ್ಮ ಜೀವನದ ಕಷ್ಟದ ದಿನಗಳನ್ನು ಹೇಳಿಕೊಂಡಿದ್ದಾರೆ. "ಸಿನಿಮಾ ಸಂಯೋಜಕರಾಗಿದ್ದ ನನ್ನ ತಂದೆ ಆರ್ ಕೆ ಶೇಖರ್ ಅವರನ್ನು 9 ನೇ ವಯಸ್ಸಿನಲ್ಲಿ ಕಳೆದುಕೊಂಡೆ, ಸಂಗೀತ ಉಪಕರಣಗಳನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಿದ್ದೆವು. ಈ ಮೂಲಕ ಸಂಗೀತ ಕ್ಷೇತ್ರಕ್ಕೆ ಅತ್ಯಂತ ಸಣ್ಣ ವಯಸ್ಸಿನಲ್ಲೇ ಪ್ರವೇಶಿಸಿದೆ. 12-22 ವಯಸ್ಸಿನ ವೇಳೆಗೆ ಎಲ್ಲವನ್ನೂ ನೋಡಿಯಾಗಿತ್ತು, ಸಾಮಾನ್ಯದ ಸಂಗತಿಗಳನ್ನು ಮಾಡುವುದೆಂದರೆ ಬೇಸರವಾಗುತ್ತಿತ್ತು, ಸಾಮಾನ್ಯವಾದ ಸಂಗತಿಗಳನ್ನು ಮಾಡುವುದರಲ್ಲಿ ಆಸಕ್ತಿ ಇರಲಿಲ್ಲ. ಪ್ರಾರಂಭದ ದಿನಗಳಲ್ಲಿ ಎದುರಿಸಿದ ಕಷ್ಟಗಳು ಮುಂದೆ ಧೈರ್ಯವಂತನಾಗುವಂತೆ ಮಾಡಿದವು. 25 ವರ್ಷದವರೆಗೂ ನಾನು ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಚಿಂತಿಸುತ್ತಿದ್ದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT