ಹಂಸಲೇಖ 
ಸಿನಿಮಾ ಸುದ್ದಿ

'ಶಂಕುತಲೆ' ಸಿನಿಮಾಕ್ಕೆ ಹೊಸ ಹಿರೋಯಿನ್ ಹುಡುಕಾಟದಲ್ಲಿ ಹಂಸಲೇಖ!

ಕನ್ನಡ ಚಿತ್ರರಂಗದ ನಾದಬ್ರಹ್ಮ ಎಂದೇ ಖ್ಯಾತಿಯಾಗಿರುವ ಸಂಗೀತ ನಿರ್ದೇಶಕ ಹಂಸಲೇಖ ಈಗ ನಿರ್ದೇಶಕರಾಗುತ್ತಿದ್ದಾರೆ.

ಕನ್ನಡ ಚಿತ್ರರಂಗದ ನಾದಬ್ರಹ್ಮ ಎಂದೇ ಖ್ಯಾತಿಯಾಗಿರುವ ಸಂಗೀತ ನಿರ್ದೇಶಕ ಹಂಸಲೇಖ ಈಗ ನಿರ್ದೇಶಕರಾಗುತ್ತಿದ್ದಾರೆ.  

'ಶಂಕುತಲೆ' ಸಿನಿಮಾದ ನಿರ್ದೇಶನದ ಜವಾಬ್ದಾರಿ ತೆಗೆದುಕೊಂಡಿದ್ದು, ಸರಿಗಮಪ ಮ್ಯೂಸಿಕ್ ರಿಯಾಲಿಟಿ ಶೋನಿಂದ ಸ್ವಲ್ಪ ಬಿಡುವು ಮಾಡಿಕೊಂಡಿದ್ದು, ಸಿನಿಮಾದ ಕೆಲಸವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ಮೂಡಿಬರಲಿದೆ.

ಸಿಟಿ ಎಕ್ಸ್ ಪ್ರೆಸ್ ಗೆ ಈ ವಿಷಯ ತಿಳಿಸಿದ ಹಂಸಲೇಖ, ಇದು ಭಾರತದ ಮೊದಲ ಕಾಲ್ಪನಿಕಾ ಕಥೆ ಸಿನಿಮಾ ಆಗಿದೆ. ಶಕುಂತಲೆ ಸಿನಿಮಾದಲ್ಲಿ ಸಂಗೀತ ಹಾಗೂ ಗ್ರಾಫಿಕ್ಸ್ ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಂಗೀತ ಹಾಗೂ ಗ್ರಾಫಿಕ್ ಕೆಲಸ ಎರಡು ತಿಂಗಳಿನಿಂದ ವಿಳಂಬವಾಗುತ್ತಿದೆ. ಮುಂದಿನ ಕೆಲ ವಾರಗಳಲ್ಲಿ ಈ ಕೆಲಸವನ್ನು ಪೂರ್ಣಗೊಳಿಸುತ್ತೇನೆ. ಇದಾದ ಒಂದೂವರೆ ತಿಂಗಳ ಬಳಿಕ ಕಲಾವಿದರೊಂದಿಗೆ ಚಿತ್ರೀಕರಣ ಆರಂಭಿಸುತ್ತೇನೆ ಎಂದು ಹೇಳಿದರು.

ಈ ಚಿತ್ರದಲ್ಲಿ ಶಕುಂತಲೆ ಪಾತ್ರದಲ್ಲಿ ಯಾರೂ ಕಾಣಿಸಿಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಡಿಸೆಂಬರ್ 9 ಅಥವಾ 12 ರಂದು ಈ ಕುತೂಹಲವನ್ನು ಬಹಿರಂಗಪಡಿಸುವುದಾಗಿ ಹಂಸಲೇಖ ಹೇಳಿದ್ದಾರೆ.  ಐಶ್ವರ್ಯಾ ರೈ ಬಚ್ಚನ್, ದೀಪಿಕಾ ಪಡುಕೋಣೆ,  ಮಾಧುರಿ ಧೀಕ್ಷಿತ್,  ಅನುಷ್ಕಾ ಮತ್ತಿತರ ಹೆಸರು ಕೇಳಿಬರುತ್ತಿದೆ.

ಶಕುಂತಲೆ ಸಿನಿಮಾದಲ್ಲಿ ಬಹು ದೊಡ್ಡ ತಾರಾಗಣವಿರಲಿದೆ. ಆದರೆ, ಮುಖ್ಯ ಪಾತ್ರ ಹೊಸ ಮುಖವಾಗಿರುತ್ತದೆ ಎಂದು ಹಂಸಲೇಖ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT