ನಟ ಅಜಿತ್ 
ಸಿನಿಮಾ ಸುದ್ದಿ

ನಟ ಅಜಿತ್ ನನ್ನು 18 ಕಿಮೀ ದೂರದವರೆಗೂ ಹಿಂಬಾಲಿಸಿದ ಆ ಅಭಿಮಾನಿ ಕೇಳಿದ್ದೇನು?

ತಮಿಳಿನ ಖ್ಯಾತ ನಟ ಅಜಿತ್ ಅಭಿಮಾನಿಗಳನ್ನು ಗೌರವಿಸುತ್ತಾರೆ, ಪ್ರೀತಿಸುತ್ತಾರೆ ಎಂದು ಎಲ್ಲರಿಗೆ ತಿಳಿದ ವಿಚಾರ. ಹಾಗೆಯೇ ಅಭಿಮಾನಿಗಳು ಸಹ ಅವರನ್ನು....

ಚೆನ್ನೈ: ತಮಿಳಿನ ಖ್ಯಾತ ನಟ ಅಜಿತ್ ಅಭಿಮಾನಿಗಳನ್ನು ಗೌರವಿಸುತ್ತಾರೆ, ಪ್ರೀತಿಸುತ್ತಾರೆ ಎಂದು ಎಲ್ಲರಿಗೆ ತಿಳಿದ ವಿಚಾರ. ಹಾಗೆಯೇ ಅಭಿಮಾನಿಗಳು ಸಹ ಅವರನ್ನು ಸಾಕಷ್ಟು ಇಷ್ಟಪಡುತ್ತಾರೆ. ಆದರೆ ಕೆಲವೊಮ್ಮೆ ಕೆಲವೊಬ್ಬ ಅಭಿಮಾನಿಗಳು ಅವರೊಡನೆ ಒಂದು ಫೋಟೋ ತೆಗೆಸಿಕೊಳ್ಳುವುದಕ್ಕಾಗಿ ಎಂತಹಾ ಅಪಾಯಕರ ಕೆಲಸಕ್ಕೆ ಸಹ ಕೈಹಾಕುತ್ತಾರ ಎನ್ನುವುದು ಅಚ್ಚರಿಯ ಸತ್ಯ.
ಅಂತಹದೇ ಒಂದು ವಿಚಿತ್ರ ಘಟನೆ ಇದು. ಗಣೇಶ್ ಎನ್ನುವ ನಟ ಆಜಿತ್ ಅವರ ಕಟ್ಟಾ ಅಭಿಮಾನಿಯೊಬ್ಬ ಅವರೊಡನೆ ಫೋಟೋ ತೆಗೆಸಿಕೊಳ್ಳುವುದಕ್ಕಾಗಿ ಅವರ ಕಾರನ್ನು ಸುಮಾರು 18 ಕಿಲೋಮೀಟರ್ಗಳಷ್ಟು ದೂರದಿಂದ ಹಿಂಬಾಲಿಸಿಕೊಇಂಡು ಬಂದಿದ್ದಾನೆ! ಹೀಗೆಂದು ಅವನೇ ತನ್ನ ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.
ಈ ಹಿಂದೆ ಆತ ಅಜಿತ್ ಜತೆಗೆ ಫೋಟೋ ತೆಗೆಸಿಕೊಳ್ಳುವ ಸಾಕಷ್ಟು ಅವಕಾಶವನ್ನು ಕೈಚೆಲ್ಲಿದ್ದಾಗಿ ಗಣೇಶ್ ಹೇಳಿದ್ದು ಈ ಬಾರಿ ಚೆನ್ನೈ ವೊಮಾನ ನಿಲ್ದಾಣದಿಂದ ಅವರ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾಗಿ ವಿವರಿಸಿದ್ದಾನೆ.
"ನವೆಂಬರ್ 10ರ ರಾತ್ರಿ ಅಜಿತ್ ಅವರನ್ನು ನಾನು ಚೆನ್ನೈ ವಿಮಾನ ನಿಲ್ದಾಣದಲ್ಲಿ ನೋಡಿದೆ. ಆದರೆ ಜನಸಂದಣಿಯ ನಡುವೆ ಇದ್ದ ಅಜಿತ್ ಸಮೀಪಕ್ಕೆ ನಾನು ತೆರಳುವುದಕ್ಕೆ ಆಗಿರಲಿಲ್ಲ. ಹೀಗಾಗಿ ನಾನು ಅವರ ಕಾರನ್ನು ಹಿಂಬಾಲಿಸಲು ನಿರ್ಧರಿಸಿದೆ. ಸುಮಾರು 18 ಕಿಮೀ. ದೂರದವರೆಗೆ ಕಾರನ್ನು ಹಿಂಬಾಲಿಸಿದ ಬಳಿಕ ನಟ ಅಜಿತ್ ಕಾರಿನ ಚಾಲಕ ನನ್ನನ್ನು ಕರೆದಿದ್ದಾರೆ.
ಅಜಿತ್ ಸಮೀಪಕ್ಕೆ ತೆರಳಿದ ಗಣೇಶ್ ಗೆ ನಟ ಅವನ ಹೆಸರನ್ನು ಕೇಳಿದ್ದಾರೆ. ಅಲ್ಲದೆ ಇಂತಹಾ ಅಪಾಯಕಾರಿ ಕೆಲಸಕ್ಕೆ ಇನ್ನು ಮುಂದೆ ಕೈಹಾಕಬಾರದೆಂದು ಬುದ್ದಿ ಮಾತನ್ನೂ ಹೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಗಣೇಶ್ ಅನಟ ಅಜಿತ್ ಅವರ ಕ್ಷಮೆ ಕೇ:ಳಿದ್ದಾರೆ, ಅಜಿತ್ ಜತೆಗೆ ಫೊಟೋ ತೆಗೆಸಿಕೊಂಡ ಗಣೇಶ್ ಅವರ ಮುಂದಿನ ಚಿತ್ರ "ವಿಶ್ವಾಸಮ್" ಯಶಸ್ಸಿಗಾಗಿ ಶುಭ ಹಾರೈಸಿದ್ದಾರೆ.
ಅಂದಹಾಗೆ ಅಜಿತ್ "ವಿಶ್ವಾಸಮ್" ಚಿತ್ರದ ತಮ್ಮ ಪಾಲಿನ ಶೂಟಿಂಗ್ ಅನ್ನು ಇದಾಗಲೇ ಸಂಪೂರ್ಣಗೊಳಿಸಿದ್ದು ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT