ಸಿನಿಮಾ ಸುದ್ದಿ

ನಾನು ಸಕ್ಕರೆಯಂತೆ, ಮಾಧ್ಯಮಗಳು ಇರುವೆ ಇದ್ದಂತೆ: ನಾನು ಹಾಗೆ ಹೇಳಿಯೇ ಇಲ್ಲ; ವರಸೆ ಬದಲಿಸಿದ ಶೃತಿ

Shilpa D
ಬೆಂಗಳೂರು:  ನಾನು ಸಕ್ಕರೆ ಇದ್ದಂತೆ, ಮಾಧ್ಯಮಗಳು ಇರುವೆ ಎಂದು ನಾನು ಹೇಳಿಯೇ ಇಲ್ಲ ಎಂದು ನಟಿ ಶೃತಿ ಹರಿಹರನ್ ತಮ್ಮ ಮಾತು ಬದಲಿಸಿದ್ದಾರೆ.
ಬುಧವಾರ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ಈ ಕುರಿತು ಪ್ರಶ್ನಿಸಿದಾಗ, ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಮಾತು ಬದಲಿಸಿದರು. ಮಾಧ್ಯಮಗಳ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ವರಸೆ ಬದಲಿಸಿದ್ದಾರೆ.
ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿತ್ತು. 
ಮಹಿಳಾ ಅಯೋಗ ಶೃತಿಗೆ ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಸೂಚಿಸಿತ್ತು.  ಈ ಹಿನ್ನೆಲೆಯಲ್ಲಿ ಇಂದು ವಕೀಲ ಅನಂತ್ ನಾಯ್ಕ್ ಅವರ ಜೊತೆ ಮಹಿಳಾ ಆಯೋಗದ ಮುಂದೆ ಹಾಜರಾದ ಶೃತಿ, ವಿಸ್ಮಯ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ.
ಶೃತಿಯನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡ ಹೋದ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನೂ ನಟಿ ಶೃತಿ ಹರಿಹರನ್ ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರನ್ನು ನವೆಂಬರ್ 14ರ ವರೆಗೆ ಬಂಧಿಸಬಾರದು ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ನವೆಂಬರ್ 28ರವರೆಗೆ ವಿಸ್ತರಿಸಿದೆ
SCROLL FOR NEXT