ಮುಂಬೈ: ಇಟಲಿಯಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಕ್ಯೂಟ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ಇದೀಗ ಆರತಕ್ಷತೆಗಾಗಿ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದಾರೆ.
ಇಂದು ಬೆಳಿಗ್ಗೆ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜೋಡಿಗಳು ಮಾಧ್ಯಮಗಳಿಗೆ ಪೋಸ್ ಕೊಟ್ಟರು.
ಹಣೆ ಮೇಲೆ ಸಿಂಧೂರು ಇಟ್ಟುಕೊಂಡಿದ್ದ ದೀಪಿಕಾ ಅವರು, ಅನಾರ್ಕಲಿ ಚೂಡಿದಾರ್ ಹಾಗೂ ರಣವೀರ್ ಸಿಂಗ್ ಅವರು ಕುರ್ತಾ ಪೈಜಾಮಾ ಹಾಕಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿ ಕಾಣಿಸುತ್ತಿದ್ದರು.
ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ನೆರವೇರಿಸಿಕೊಕಂಡ ಜೋಡಿಗಳು, ಬುಧವಾರ ಬೆಂಗಳೂರಿನಲ್ಲಿ ನಡೆಯಲಿರುವ ಆರತಕ್ಷತೆಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.