ಶರತ್ ಕುಮಾರ್ 
ಸಿನಿಮಾ ಸುದ್ದಿ

ಬೆಂಗಳೂರಿನಲ್ಲಿ ಕಳೆದ ದಿನಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಹಿರಿಯ ನಟ ಶರತ್ ಕುಮಾರ್!

ಸ್ಯಾಂಡಲ್ವುಡ್ ನ ಯುವರಾಜ ನಿಖಿಲ್ ಕುಮಾರ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಟಿಸಿರುವ ದಕ್ಷಿಣ ಭಾರತದ ನಟ ಶರತ್ ಕುಮಾರ್ ಅವರು ತಾವು ಹಿಂದೆ...

ಸ್ಯಾಂಡಲ್ವುಡ್ ನ ಯುವರಾಜ ನಿಖಿಲ್ ಕುಮಾರ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಟಿಸಿರುವ ದಕ್ಷಿಣ ಭಾರತದ ನಟ ಶರತ್ ಕುಮಾರ್ ಅವರು ತಾವು ಹಿಂದೆ ಬೆಂಗಳೂರಿನಲ್ಲಿ ಕಳೆದಿದ್ದ ದಿನಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. 
ಶರತ್ ಕುಮಾರ್ ಅವರು ಸದ್ಯ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಟಿಸುತ್ತಿದ್ದು ನಟ ಕಮ್ ರಾಜಕಾರಣಿ ಶರತ್ ಕುಮಾರ್ ಅವರು 70ರ ದಶಕದಲ್ಲಿ ಬೆಂಗಳೂರಿನಲ್ಲಿ ನ್ಯೂಸ್ ಪೇಪರ್ ಬಾಯ್ ಆಗಿ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. 
ತಮಿಳಿನ ದಿನಕರನ್ ಪತ್ರಿಕೆಯ ಡೀಲರ್ ಶಿಪ್ ತೆಗೆದುಕೊಂಡಿದ್ದ ನಾನು ಬೆಳಗ್ಗೆ 5 ಗಂಟೆಗೆ ಎದ್ದು ಜಯನಗರ ಸುತ್ತ ಮುತ್ತ ಮನೆಗಳಿಗೆ ಪತ್ರಿಕೆಯನ್ನು ಹಾಕುತ್ತಿದ್ದೆ. ನನ್ನ ಜೀವನ ಶುರುವಾಗಿದ್ದೆ ಬೆಂಗಳೂರಿನಲ್ಲಿ ಹೀಗಾಗಿ ನಾನು ಬೆಂಗಳೂರಿಗೆ ಬಂದಾಗೆಲ್ಲಾ ಆ ನೆನಪುಗಳು ಮರುಕಳಿಸುತ್ತವೆ ಎಂದು ಹೇಳಿದರು. 
ನಂತರ ಪತ್ರಿಕೆಯೊಂದರಲ್ಲಿ ಕೆಲಸ ಸಿಕ್ಕ ನಿಮಿತ್ತ ಶರತ್ ಕುಮಾರ್ ಅವರು ಚೆನ್ನೈಗೆ ತೆರಳಿದ್ದು ಆನಂತರ ಅವರು ಹಿಂದೆ ತಿರುಗಿ ನೋಡಿಲ್ಲ. ದರ್ಶನ್ ಅಭಿನಯದ ಸಾರಥಿ ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 
ಆ ಬಳಿಕ ಮೈನಾ, ಸಂತೆಯಲ್ಲಿ ನಿಂತ ಕಬೀರ ಮತ್ತು ಪುನೀತ್ ರಾಜಕುಮಾರ್ ಅಭಿನಯದ ರಾಜಕುಮಾರ ಚಿತ್ರದಲ್ಲಿ ಅಭಿನಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT