ಸಿನಿಮಾ ಸುದ್ದಿ

ಆತ್ಮೀಯ ಗೆಳೆಯನ ಪಾರ್ಥಿವ ಶರೀರದ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತ ತೆಲುಗು ನಟ ಚಿರಂಜೀವಿ, ಮೋಹನ್ ಬಾಬು!

Vishwanath S
ಬೆಂಗಳೂರು: ಸ್ಯಾಂಡಲ್ವುಡ್ ನ ರೆಬೆಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾಗಿದ್ದು ಅವರ ಅಂತಿಮ ದರ್ಶನ ಪಡೆದ ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಮತ್ತು ಮೋಹನ್ ಬಾಬು ಅವರು ಕಣ್ಣೀರಿಟ್ಟಿದ್ದಾರೆ. 
ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಗೆಳೆಯನ ಅಂತಿಮ ದರ್ಶನ ಪಡೆಯಲು ಬಂದ ನಟ ಮೋಹನ್ ಬಾಬು ಅವರು ಗೆಳೆಯನ ಪಾರ್ಥಿವ ಶರೀರ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತರು. ನಂತರ ಬಂದ ಚಿರಂಜೀವಿ ಅವರು ಸಹ ಗೆಳೆಯನ ಮುಂದೆ ನಿಂತು ಕಣ್ಣೀರಿಟ್ಟರು. ಬಳಿಕ ಅಂಬಿ ಪತಿ ಸುಮಲತ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. 
ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಅಂಬರೀಶ್ ಅವರ ಅಂತಿಮ ದರ್ಶನ ಪಡೆದರು. 
SCROLL FOR NEXT