ಮಗನಂತೆ ಮಧ್ಯರಾತ್ರಿಯಿಂದಲೂ ಸುಮಲತಾ ಅವರಿಗೆ ಬೆನ್ನೆಲುಬಾಗಿ ನಿಂತ ಯಶ್ 
ಸಿನಿಮಾ ಸುದ್ದಿ

ಅಂಬರೀಷ್ ನಿಧನ: ಮಗನಂತೆ ಮಧ್ಯರಾತ್ರಿಯಿಂದಲೂ ಸುಮಲತಾ ಅವರಿಗೆ ಬೆನ್ನೆಲುಬಾಗಿ ನಿಂತ ಯಶ್

ಶನಿವಾರ ರಾತ್ರಿ ನಿಧನರಾದ ಕನ್ನಡ ಚಿತ್ರರಂಗದ ಮೇರು ನಟ ಅಂಬರೀಶ್ ಅವರ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದ್ದು....

ಶನಿವಾರ ರಾತ್ರಿ ನಿಧನರಾದ ಕನ್ನಡ ಚಿತ್ರರಂಗದ ಮೇರು ನಟ ಅಂಬರೀಶ್ ಅವರ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದ್ದು, ಸ್ವತಃ ಮುಖ್ಯಮಂತ್ರಿಗಳು ಅಂಬರೀಷ್ ಅವರ ಅಂತಿಮ ದರ್ಶನದ ವ್ಯವಸ್ಥೆಯಿಂದ ಹಿಡಿದು ಅಂತ್ಯ ಸಂಸ್ಕಾರಕ್ಕೆ ಅಗತ್ಯವಿರುವ ತಯಾರಿಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. 
ಈ ನಡುವೆ ಅಂಬರೀಷ್ ಅವರ ಆಶೀರ್ವಾದ ಪಡೆದು ನಟನೆಗೆ ಎಂಟ್ರಿ ಕೊಟ್ಟಿದ್ದ ರಾಕಿಂಗ್ ಸ್ಟಾರ್ ಯಶ್, ಮಗನಂತೆ ಅಂಬರೀಷ್ ಅವರು ನಿಧನರಾದ ಮಧ್ಯರಾತ್ರಿಯಿಂದಲೂ ಸುಮಲತಾ ಅವರಿಗೆ ಬೆನ್ನೆಲುಬಾಗಿ ನಿಂತಿದ್ದರು, ಪಾರ್ಥಿವ ಶರೀರದ ಜೊತೆಗೇ ಇದ್ದ ಯಶ್ ಕಂಠೀರವ ಕ್ರೀಡಾಂಗದಲ್ಲಿ ಅಂತಿಮ ದರ್ಶನ ವ್ಯವಸ್ಥೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಿದ್ದರು.  ಇನ್ನು ಭಾನುವಾರ ಸಂಜೆ ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಿದಾಗಲೂ ಅಂಬರೀಷ್ ಅವರ ಕುಟುಂಬ ಸದಸ್ಯರೊಂದಿಗೆ ಇದ್ದ ಯಶ್, ತಮ್ಮ ನೆಚ್ಚಿನ ನಟನನ್ನು ಕೊನೆಯ ಬಾರಿ ಕಣ್ತುಂಬಿಕೊಳ್ಳುವುದಕ್ಕೆ ಹರಿದುಬರುತ್ತಿದ್ದ ಜನಸಾಗರವನ್ನು ನಿಯಂತ್ರಿಸಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತಿದ್ದರು. ಕೆಲವು ಅಭಿಮಾನಿಗಳು ಬ್ಯಾರಿಕೆಡ್ ಮುರಿದು ಒಳನುಗ್ಗಲು ಯತ್ನಿಸಿದ್ದ ವೇಳೆ ನಟ ಯಶ್ ಅವರನ್ನು ಸಂತೈಸಿ ಅಂಬರೀಷ್ ಅವರ ಅಂತಿಮ ದರ್ಶನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸುತ್ತಾ, ಮಗನಂತೆ ಅಂಬರೀಷ್ ಕುಟುಂಬ ಸದಸ್ಯರಿಗೆ ನೆರವಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT