ಭಾರತಿ ವಿಷ್ಣುವರ್ಧನ್ 
ಸಿನಿಮಾ ಸುದ್ದಿ

ವಿಷ್ಣು ಸ್ಮಾರಕ ಮೈಸೂರಲ್ಲಿಯೇ ಆಗಲಿ, ಇಲ್ಲದಿದ್ದರೆ ಬೇಡ: ಭಾರತಿ ವಿಷ್ಣುವರ್ಧನ್

ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ವಿಚಾರ ಕುರಿತು ಚರ್ಚಿಸಲು ಶಾಸಕ, ನಿರ್ಮಾಪಕರ ಸಂಘದ ...

ಬೆಂಗಳೂರು: ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ವಿಚಾರ ಕುರಿತು ಚರ್ಚಿಸಲು ಶಾಸಕ, ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಹಾಗೂ ನಿರ್ಮಾಪಕ ಕೆ. ಮಂಜು ಭಾರತಿ ವಿಷ್ಣುವರ್ಧನ್‌ ಅವರ ನಿವಾಸಕ್ಕೆ ತೆರಳಿದ್ದರು.  ಈ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರ ಹುಟ್ಟೂರು ಮತ್ತು ಅವರಿಗೆ ಬಹಳ ಅಚ್ಚುಮೆಚ್ಚಾಗಿರುವ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸುವಂತೆ ವಿಷ್ಣುವರ್ಧನ್ ಕುಟುಂಬದವರು ಒತ್ತಾಯಿಸಿದ್ದಾರೆ ಎಂದು ಮುನಿರತ್ನ ತಿಳಿಸಿದ್ದಾರೆ.

ನಿನ್ನೆ ಭಾರತಿ ವಿಷ್ಣುವರ್ಧನ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿಯೇ ವಿಷ್ಣು ಸ್ಮಾರಕ ನಿರ್ಮಿಸುವಂತೆ ಕುಟುಂಬದವರು  ಶಾಸಕನಾಗಿರುವ ನನ್ನ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದರು.

ವಿಷ್ಣುವರ್ಧನ್‌ ಕುಟುಂಬ ಸ್ಮಾರಕ ನಿರ್ಮಾಣ ಕುರಿತು ಮುಖ್ಯಮಂತ್ರಿಗೆ ಮನವಿ ಪತ್ರ ಬರೆದು, ನನಗೆ ನೀಡಿದ್ದಾರೆ. ಹಾಗಾಗಿ ಅದರಲ್ಲಿ ಏನಿದೆ ಎಂದು ನಾನು ಓದಲು ಹೋಗುವುದಿಲ್ಲ.  ಈ ಪತ್ರವನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ, ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸುತ್ತೇನೆ. ಸ್ಮಾರಕ ನಿರ್ಮಾಣ ವಿಚಾರವಾಗಿ ಚಿತ್ರರಂಗ ಹಾಗೂ ಅಭಿಮಾನಿಗಳ ಸಲಹೆ ಪಡೆದುಕೊಳ್ಳುತ್ತೇವೆ. ಆದರೆ, ಕುಟುಂಬದ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಅದೇ ಅಂತಿಮ. ಈಗಾಗಲೇ ನಿರ್ಮಾಣವಾಗಿರುವ ಡಾ. ರಾಜ್‌ ಹಾಗೂ ಅಂಬರೀಶ್‌ ಸ್ಮಾರಕದಂತೆಯೇ, ವಿಷ್ಣುವರ್ಧನ್‌ ಸ್ಮಾರಕವೂ ನಿರ್ಮಾಣ ಆಗಬೇಕು, ಮೂವರಿಗೂ ಸಮಾನ ಪ್ರಾಶಸ್ತ್ಯ ನೀಡಬೇಕೆಂಬುದು ನಮ್ಮ ಆಸೆ' ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್‌, "ಅಭಿಮಾನ್‌ ಸ್ಟುಡಿಯೋ ಜಾಗ ವಿವಾದ ಕೋರ್ಟ್‌ನಲ್ಲಿದೆ. ಅದು ಬಗೆಹರಿಯದ ವ್ಯಾಜ್ಯ. ಹೀಗಾಗಿಯೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣವಾಗಲಿ ಎಂಬುದು ನಮ್ಮ ಆಶಯ. ಅದಕ್ಕಾಗಿ ಈಗಾಗಲೇ ಗುದ್ದಲಿ ಪೂಜೆ ಕೂಡ ಆಗಿದೆ. ಆದರೆ, ಅಲ್ಲೂ ಒಂದಷ್ಟು ಕಾನೂನು ಸಮಸ್ಯೆಗಳು ಬಂದಿದ್ದರಿಂದ  ಕೆಲಸ ನಿಂತು ಹೋಯ್ತು. ಅದನ್ನೆಲ್ಲ ಬಗೆಹರಿಸಿ ಸ್ಮಾರಕ ನಿರ್ಮಿಸಿದರೆ ಸಾಕು. ಈ ವಿಚಾರವನ್ನು ಮುಂದುವರಿಸಲು ನಮಗೂ ಇಷ್ಟವಿಲ್ಲ. ಆದಷ್ಟು ಬೇಗ ಸರಕಾರ ಈ ಬಗ್ಗೆ ನಿರ್ಧರಿಸಲಿ' ಎಂದರು.

ಸ್ಮಾರಕ ನಿರ್ಮಾಣಕ್ಕೆ ಮೈಸೂರೇ ಕಡೆ ಆಯ್ಕೆ ಎಂಬುದು ನಮ್ಮ ಕುಟುಂಬದ ನಿರ್ಧಾರ. ಇಲ್ಲಾ ಅಂದ್ರೆ ಸ್ಮಾರಕ ನಿರ್ಮಾಣ ಮಾಡುವ ಯೋಚನೆಯೇ ಬೇಡ ಎಂದು ವಿಷ್ಣುವರ್ಧನ್‌ ಮಗಳು ಕೀರ್ತಿ ಹೇಳಿದರು.

ಇನ್ನೊಂದೆಡೆ ಅಭಿಮಾನ್‌ ಸ್ಟುಡಿಯೋದ ಮಾಲೀಕತ್ವ ಹೊಂದಿರುವ ಹಿರಿಯ ನಟ ದಿವಂಗತ ಬಾಲಕೃಷ್ಣ ಅವರ ಪುತ್ರ ಗಣೇಶ್‌, "ವಿಷ್ಣು ಸಮಾಧಿ ನಿರ್ಮಾಣಕ್ಕೆ 50/150 ಅಳತೆಯ ಜಾಗವನ್ನು ಉಚಿತವಾಗಿ ನೀಡಲು ಸಿದ್ಧ' ಎಂದು ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಗಣೇಶ್‌, "ಇಲ್ಲಿವರೆಗೆ ಈ ಸ್ಟುಡಿಯೋ ಮಾಲೀಕತ್ವದ ವಿವಾದ ಕೋರ್ಟ್‌ನಲ್ಲಿತ್ತು. ಈಗ ವ್ಯಾಜ್ಯ ಬಗೆಹರಿದಿದ್ದು, ಸಂಪೂರ್ಣ ಮಾಲೀಕತ್ವ  ನನಗೆ ಬಂದಿದೆ. ಹಾಗಾಗಿ, ಸ್ಮಾರಕ ನಿರ್ಮಾಣಕ್ಕೆ ಬೇಕಾದ ಜಾಗವನ್ನು ಉಚಿತವಾಗಿ ನೀಡಲಿದ್ದೇನೆ. ಆದರೆ, ಸರ್ಕಾರ ನಮಗೆ ಸಹಕಾರ ನೀಡಬೇಕು' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT