ಕೀರ್ತಿ ಗೌಡ, ದುನಿಯಾ ವಿಜಯ್, ನಾಗರತ್ನ 
ಸಿನಿಮಾ ಸುದ್ದಿ

ದುನಿಯಾ ವಿಜಯ್ ಗೆ ಕೀರ್ತಿ ಗೌಡ 5ನೇ ಪತ್ನಿ: ಮೊದಲ ಪತ್ನಿ ನಾಗರತ್ನ

ನಟ ದುನಿಯಾ ವಿಜಯ್ ಬಾಳಿನಲ್ಲಿ ಮತ್ತೆ ಬಿರುಗಾಳಿ ಎದ್ದಿದೆ. ವಿಜಿಗೆ ಕೀರ್ತಿ ಗೌಡ ಎರಡನೇ ಪತ್ನಿ ಅಲ್ಲ...

ಬೆಂಗಳೂರು: ನಟ ದುನಿಯಾ ವಿಜಯ್ ಬಾಳಿನಲ್ಲಿ ಮತ್ತೆ ಬಿರುಗಾಳಿ ಎದ್ದಿದೆ. ವಿಜಿಗೆ ಕೀರ್ತಿ ಗೌಡ ಎರಡನೇ ಪತ್ನಿ ಅಲ್ಲ. ಐದನೇ ಪತ್ನಿ ಎಂದು ಅವರ ಮೊದಲ ಪತ್ನಿ ನಾಗರತ್ನ ಅವರು ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ನಿನ್ನೆ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ, ನಾಗರತ್ನ ವಿರುದ್ಧ ದುನಿಯಾ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ನಾಗರತ್ನ ಅವರು, ಚಿನ್ನದ ಮೊಟ್ಟೆ ಇಡೋ ಕೋಳಿ ನೋಡ್ಕೊಂಡು ನಾನು ಬಂದಿಲ್ಲ. ಅದನ್ನು ನೋಡಿ ಬಂದವರು ಇನ್ನೊಬ್ಬರು. ನನಗೆ ಆ ಮಾತನ್ನು ಹೇಳುವುದು ಬೇಡ. ತಂದೆ, ತಾಯಿ ಹೆಸರಿನಲ್ಲಿ ಅನುಕಂಪ ಗಿಟ್ಟಿಸೋದು ಬೇಡ. ನನ್ನ ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೇನೆ. ವರ್ಷಕ್ಕೆ ಒಂದೊಂದು ಮದುವೆಯಾಗೋದು ಯಾವ ನ್ಯಾಯ ಹೇಳಿ ಎಂದು ವಾಗ್ದಾಳಿ ನಡೆಸಿದರು.
ಅತ್ತೆ, ಮಾವನನ್ನು ನೋಡಿಕೊಳ್ಳಲಿಲ್ಲ ಎಂಬುದೆಲ್ಲಾ ಸುಳ್ಳು ಮತ್ತು ದುನಿಯಾ ವಿಜಯ್ ಕೀರ್ತಿ ಗೌಡ ಅವರನ್ನು ಮದುವೆಯೇ ಆಗಿಲ್ಲ ಎಂದ ನಾಗರತ್ನ, ದುನಿಯಾ ವಿಜಯ್ ಗೆ ಈ ರೀತಿಯ ಸಂಬಂಧಗಳು ಹೊಸದಲ್ಲ. ನನ್ನ ಮದುವೆಗೂ ಮುಂಚೆಯೇ ಅವರಿಗೆ ಇನ್ನೊಂದು ಮದುವೆಯಾಗಿತ್ತು. ನಂತರ ಶುಭ ಪೂಂಜಾ ಬಂದರು, ಬಳಿಕ ಜಯಮ್ಮನ ಮಗ ಸಿನಿಮಾದ ಹೀರೋಯಿನ್ ಭಾರತಿ.. ಈಗ ಕೀರ್ತಿ ಗೌಡ..ಹೀಗೆ ವರ್ಷಕ್ಕೆ ಒಂದೊಂದು ಮದುವೆ ಆಗೋದು ವಿಜಿಗೆ ಕರಗತವಾಗಿದೆ ಎಂದು ವ್ಯಂಗ್ಯವಾಡಿದರು.
ಕೀರ್ತಿ ಗೌಡ ಬಂದ ಮೇಲೆ ವಿಜಿಯ ಯಾವ ಸಿನಿಮಾ ಹಿಟ್ ಆಗಿದೆ. ಕೀರ್ತಿ ಗೌಡಗಾಗಿ ವಿಜಿ ಇಷ್ಟೆಲ್ಲಾ ಕಥೆ ಹೆಣೆಯುತ್ತಿದ್ದಾರೆ. ನನ್ನ ಜೊತೆ ಯಾವ ಒಡಂಬಡಿಕೆಯೂ ಮಾಡಿಕೊಂಡಿಲ್ಲ. ನಾನು ಯಾವ ಕಾರಣಕ್ಕೂ ಡೈವೋರ್ಸ್ ನೀಡಲ್ಲ. ನಾನು ಕೂಡಾ ಸಂಸಾರ ನಡೆಸಲು  ಬಂದವಳು ಎಂದು ನಾಗರತ್ನ ತಿರುಗೇಟು ನೀಡಿದ್ದಾರೆ.
2009ರಲ್ಲಿ ದುನಿಯಾ ಋಣ ಎಂಬ ಹೆಸರಿನ ಮನೆಯನ್ನು ನನ್ನ ಹೆಸರಿಗೆ ಬರೆದಿದ್ದರು. ಅವರ ಮಕ್ಕಳಿಗೆ ಅವರು ಆಸ್ತಿ ಬರೆದಿರುವುದರಲ್ಲಿ ವಿಶೇಷ ಏನಿದೆ? ಹಲವು ಕಡೆ ದುನಿಯಾ ವಿಜಯ್ ಗೆ ಸಂಬಂಧಿಸಿದ ಮನೆಗಳಿವೆ. ಅವುಗಳೆಲ್ಲ. ಏನಾಯ್ತು. ಯಾರ ಅನುಕಂಪ ಗಿಟ್ಟಿಸಲು ಅವರು ಬಾಡಿಗೆ ಮನೆಯಲ್ಲಿದ್ದಾರೆ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT