ಹಿರಿಯ ನಟಿ ಲಕ್ಷ್ಮೀ ಮತ್ತು ನಿರ್ದೇಶಕ ಎಸ್.ನಾರಾಯಣ್ 
ಸಿನಿಮಾ ಸುದ್ದಿ

ಹಿರಿಯ ನಟಿ ಲಕ್ಷ್ಮೀ, ನಿರ್ದೇಶಕ ಎಸ್.ನಾರಾಯಣ್'ಗೆ ಜೀವಮಾನ ಸಾಧನೆ ಪ್ರಶಸ್ತಿ

ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು...

ಬೆಂಗಳೂರು: ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು ಆಯ್ಕೆಯಾಗಿದ್ದಾರೆ. 
ಪ್ರಶಸ್ತಿಯು ತಲಾ ರೂ.50 ಗ್ರಾಂ ಚಿನ್ನದ ಪದಕ ಮತ್ತು ಎರಡು ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ. 
2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲು ನಟ ಮತ್ತು ನಿರ್ಮಾಪಕ ಜಿ.ಕೆ.ಶ್ರೀನಿವಾಸ ಮೂರ್ತಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ  ಮಾಡಲಾಗಿತ್ತು. 
ಇದರಂತೆ ಸೋಮವಾರ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದರು. 
ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಪಂಚಭಾಷೆ ತಾರೆ ಲಕ್ಷ್ಮೀ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ನಿರ್ದೇಶಕರಿಗೆ ನೀಡುವ ಪುಟ್ಟಣ ಕಣಗಾಲ್ ಪ್ರಶಸ್ತಿಗಾಗಿ ನಿರ್ದೇಶಕ ಎಸ್.ನಾರಾಯಣ್ ಮತ್ತು ಚಿತ್ರರಂಗದ ವಿವಿಧ ವಲಯದಲ್ಲಿ ಸಾಧನೆ ಮಾಡಿದ ಹಿರಿಯರಿಗೆ ನೀಡುವ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ನಿರ್ಮಾಪಕ ಜಿ.ಎನ್.ಲಕ್ಷ್ಮೀಪತಿಯವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT