ಮಣಿರತ್ನಂ 
ಸಿನಿಮಾ ಸುದ್ದಿ

ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಬೆದರಿಕೆ ಕರೆ : ಪೊಲೀಸ್ ಭದ್ರತೆ

ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚೆನ್ನೈನ ಅಭಿರಾಮಪುರದಲ್ಲಿರುವ ಮಣಿರತ್ನಂ ಅವರ ...

ಚೆನ್ನೈ:  ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚೆನ್ನೈನ ಅಭಿರಾಮಪುರದಲ್ಲಿರುವ ಮಣಿರತ್ನಂ ಅವರ ನಿವಾಸಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಈ ಸಂಬಂಧ  ನಿರ್ದೇಶಕ ಮಣಿರತ್ನಂ ದೂರು ದಾಖಲಿಸಿದ್ದಾರೆ.
ಬಾಂಬ್​ಸ್ಕ್ವಾಡ್​​​ಮನೆಯನ್ನು ಪರಿಶೀಲನೆ ಮಾಡಿದ್ದು, ಅವರ ಮನೆ ಹಾಗೂ ಕಚೇರಿಗೆ  ಭದ್ರತೆ ಹೆಚ್ಚಿಸಲಾಗಿದೆ. 
ಮಣಿರತ್ನಂ ಅವರ ಇತ್ತೀಚಿನ ಚೆಕ್ಕ ಚೀವಂತ ವಾನಂ ಚಿತ್ರದಲ್ಲಿನ ವಿವಾದಾತ್ಮಕ ಸಂಭಾಷಣೆಯೇ ಈ ಬಾಂಬ್ ಬೆದರಿಕೆಗೆ ಕಾರಣ ಎಂದು ಹೇಳಲಾಗಿದೆ. ಈ ಸಿನಿಮಾದಲ್ಲಿನ ಕೆಲವು ವಿವಾದಾತ್ಮಕ ಸಂಭಾಷಣೆಗಳನ್ನು ತೆಗೆದು ಹಾಕಬೇಕೆಂದು ಬೆದರಿಕೆ ಹಾಕಲಾಗಿದೆ. 
ಸೆಪ್ಟಂಬರ್ 28 ರಂದು ಬಿಡುಗಡೆಯಾದ ಚೆಕ್ಕ ಚೀವಂತ ವಾನಂ ಚಿತ್ರದಲ್ಲಿ ನಟರಾದ ಅರವಿಂದ ಸ್ವಾಮಿ, ಸಿಂಬು ವಿಜಯ್ ಸೇತುಪತಿ, ಅರುಣ್ ವಿಜಯ್,  ಜ್ಯೋತಿಕಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT