ನಟಿ ಸೋಹಾ ಅಲಿ ಖಾನ್ 
ಸಿನಿಮಾ ಸುದ್ದಿ

ಭಾರತದಲ್ಲಿ ಮಹಿಳೆಯಾಗಿರುವುದು ಅತ್ಯಂತ ಕಷ್ಟಕರ: ನಟಿ ಸೋಹಾ ಅಲಿ ಖಾನ್

ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಅವರಿಗೆ ನಟಿ ಸೋಹಾ ಅಲಿ ಖಾನ್ ಮಂಗಳವಾರ ಬೆಂಬಲ ನೀಡಿದ್ದಾರೆ...

ಮುಂಬೈ: ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಅವರಿಗೆ ನಟಿ ಸೋಹಾ ಅಲಿ ಖಾನ್ ಮಂಗಳವಾರ ಬೆಂಬಲ ನೀಡಿದ್ದಾರೆ. 
ರೇಡಿಯೋ ಶೋ 'ನೋ ಫಿಲ್ಟರ್ ನೇಹಾ ಸೀಸನ್ 3' ಕುರಿತಂತೆ ನೇಹಾ ದೂಪಿಯಾ, ಸೋಫೀ ಚೌಧರಿ, ಅಂಗದ್ ಬೇಡಿ ಹಾಗೂ ಗೌರವ್ ಕಪೂರ್ ಅವರು ನಡೆಸುತ್ತಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಸೋಹಾ ಅಲಿ ಖಾನ್ ಅವರು ತನುಶ್ರೀ ದತ್ತಾ ಅವರಿಗೆ ಬೆಂಬಲ ನೀಡಿದ್ದಾರೆ. 
#MeToo ಅಭಿಯಾನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಹಿಳೆಯರು ಮಾತನಾಡುತ್ತಿರುವುದು ನಿಜಕ್ಕೂ ಸಂತಸವನ್ನು ತಂದಿದೆ. ಭಾರತದಂತಹ ರಾಷ್ಟ್ರದಲ್ಲಿ ಮಹಿಳೆಯರು ಪ್ರತೀ ನಿತ್ಯ ಸಂಕಷ್ಟಗಳೊಂದಿಗೆ ಜೀವನ ನಡೆಸುವುದು ಬಹಳ ಕಷ್ಟ ಎಂದು ಹೇಳಿದ್ದಾರೆ. 
ಇಂತಹ ದನಿಗಳು ಸಾಕಷ್ಟು ಎದ್ದುನಿಲ್ಲಲು ಸಾಕಷ್ಟು ಧೈರ್ಯವನ್ನು ನೀಡುತ್ತದೆ. ನನ್ನ ಕಥೆಯನ್ನೂ ಹೇಳಿಕೊಳ್ಳಬೇಕೆಂದು ಎನಿಸುತ್ತದೆ. ಮಹಿಳೆಯರಿಗೆ ಬೆಂಬಲ ಹಾಗೂ ಧೈರ್ಯವನ್ನು ನೀಡಬೇಕು ಯಾವುದೇ ಮಹಿಳೆಯರು ತಮ್ಮ ಕಥೆಯನ್ನು ಹಂಚಿಕೊಳ್ಳಲು ಬಯಸಿದರೆ ಅಂತಹವರಿಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆಂದು ತಿಳಿಸಿದ್ದಾರೆ. 
ನಂತರ ಮಾತನಾಡಿರುವ ನೇಹಾ ದೂಪಿಯಾ ಅವರು, ಕೇವಲ ನಟಿಯಾಗಿ ಅಷ್ಟೇ ಅಲ್ಲ, ಮಹಿಳೆಯಾಗಿ ಇಂತಹ ಕಥೆಗಳನ್ನು ಓದಿದಾಗ ಹಾಗೂ ಕೇಳಿದಾಗ ಬಹಳ ಕೋಪ ಬರುತ್ತದೆ. ಕೆಲವೊಮ್ಮೆ ಜನರು ಪ್ರಶ್ನೆ ಮಾಡುತ್ತಲೇ ಇರುತ್ತಾರೆ. ಇದರಲ್ಲಿ ಪ್ರಶ್ನೆ ಮಾಡುವ ಅಗತ್ಯವಿಲ್ಲ. ಅವರನ್ನು ನಾವು ನಂಬಬೇಕು ಎಂದು ಹೇಳಿದ್ದಾರೆ. 
ಸೋಫಿ ಚೌಧರಿ ಮಾತನಾಡಿ, ಈ ವಿಚಾರದ ಬಗ್ಗೆ ಬಾಯಿಬಿಡಲು ತನುಶ್ರೀಯವರಿಗೆ 10 ವರ್ಷಗಳ ಸಮಯವೇಕೆ ಬೇಕಾಯಿತು ಎಂದು ಜನರು ಪ್ರಶ್ನಿಸುತ್ತಿರವುದು ನಿಜಕ್ಕೂ ಖಂಡನೀಯ. ಪ್ರಚಾರಕ್ಕಾಗಿ ಆಕೆ ಹೀಗೆಲ್ಲಾ ಮಾಡುತ್ತಿದ್ದಾಳೆಂದು ನನಗನ್ನಿಸುತ್ತಿಲ್ಲ. ತನುಶ್ರೀ ಬಗ್ಗೆ ಅಲ್ಪಸ್ವಲ್ಪವಷ್ಟೇ ಗೊತ್ತು. ಕಾರ್ಯಕ್ರಮವೊಂದರಲ್ಲಿ ಚಿತ್ರಗಳಲ್ಲಿ ನಟಿಸುವುದನ್ನು ಏಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆಗೆ ಆಕೆ ಮೌನ ಮುರಿದು ಮಾತನಾಡಿ ಸ್ಪಷ್ಟಪಡಿಸಿದ್ದಾಳೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT