ಸುದೀಪ್-ದರ್ಶನ್-ಜಗ್ಗೇಶ್ 
ಸಿನಿಮಾ ಸುದ್ದಿ

ಜಾತಿ ಬಣ್ಣ ಹಚ್ಚಬೇಡಿ, ವೀರ ಮದಕರಿ ವಿವಾದಕ್ಕೆ ನವರಸ ನಾಯಕ ಜಗ್ಗೇಶ್ ಕೊಟ್ಟ ತಿರುಗೇಟು!

ಚಿತ್ರದುರ್ಗದ ವೀರ ಮದಕರಿ ನಾಯಕನ ಜೀವನ ಚರಿತ್ರೆ ಆಧರಿಸಿದ ಐತಿಹಾಸಿಕ ಚಿತ್ರ ನಿರ್ಮಾಣ ಮತ್ತು ನಟನೆಯ ವಿಚಾರವಾಗಿ ಸ್ಯಾಂಡಲ್ವುಡ್ ನ ಖ್ಯಾತ...

ಬೆಂಗಳೂರು: ಚಿತ್ರದುರ್ಗದ ವೀರ ಮದಕರಿ ನಾಯಕನ ಜೀವನ ಚರಿತ್ರೆ ಆಧರಿಸಿದ ಐತಿಹಾಸಿಕ ಚಿತ್ರ ನಿರ್ಮಾಣ ಮತ್ತು ನಟನೆಯ ವಿಚಾರವಾಗಿ ಸ್ಯಾಂಡಲ್ವುಡ್ ನ ಖ್ಯಾತ ನಟರಾದ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಏರ್ಪಟ್ಟಿರುವ ಪ್ರತಿಷ್ಠೆಯ ಕಾದಾಟ ಜಾತಿಯ ಆಯಾಮ ಪಡೆದುಕೊಂಡಿದೆ. 
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಹಿರಿಯ ನಟ ಜಗ್ಗೇಶ್ ಶಾರದಾಂಬೆಯ ಮಡಿಲಲ್ಲಿ ಜಾತಿ ಎಂಬುದು ಇರಬಾರದು. ಕಲೆಗೆ ಜಾತಿಯಿಲ್ಲ. ವಿಶ್ವದಲ್ಲೆ ಜಾತಿ ಇಲ್ಲದೆ ಒಂದೆ ತಾಯಿ ಮಕ್ಕಳಂತೆ ಬದುಕುವ ಸ್ಥಳ ಶಾರದೆ ಮಡಿಲು! ಇಂಥ ಪವಿತ್ರ ಜಾಗದಲ್ಲಿ ಜಾತಿ ವಿಷಬೀಜ ನೆತ್ತುವರು ಅಳಿವಿನ ಅಂಚಿಗೆ ಸರಿಯುತ್ತಾರೆ! ಮತ ರಾಜಕೀಯಕ್ಕೆ ಮೀಸಲಾದ ಜಾತಿ ಕಲೆಗೆಬೇಡ! ವಿನಾಶಕಾಲಕ್ಕೆ ವಿಪರೀತಬುದ್ಧಿ! ಎಚ್ಚರವಾಗಿರಿ ಕಲಾಬಂಧುಗಳೆ..!! ಎಂದು ಟ್ವೀಟ್ ಮಾಡಿದ್ದಾರೆ. 
ವೀರ ಮದಕರಿ ಚಿತ್ರ ನಿರ್ಮಾಣ ಕುರಿತು ಮಾತನಾಡಿದ್ದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ನಾಯಕ ಸಮುದಾಯದ ಸುದೀಪ್ ಅವರೇ ವೀರ ಮದಕರಿ ಸಿನಿಮಾ ಮಾಡಬೇಕು. ದರ್ಶನ್ ಸೇರಿದಂತೆ ಬೇರೆ ಯಾರಾದರೂ ಮಾಡಿದರೆ, ಈ ಸಿನಿಮಾವನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT