ಮಯೂರಿ ಉಪಾಧ್ಯ 
ಸಿನಿಮಾ ಸುದ್ದಿ

ಗಾಯಕ ರಘು ದೀಕ್ಷಿತ್ ಮೇಲೆ ಲೈಂಗಿಕ ಕಿರುಕುಳ ಆರೋಪ; ಪತ್ನಿ ಮಯೂರಿ ಹೇಳಿದ್ದೇನು?

ಖ್ಯಾತ ಸಂಗೀತಗಾರ ರಘು ದೀಕ್ಷಿತ್ ಮೇಲೆ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ್ ಮಿ ಟೂ ...

ಬೆಂಗಳೂರು: ಖ್ಯಾತ ಸಂಗೀತಗಾರ ರಘು ದೀಕ್ಷಿತ್ ಮೇಲೆ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ್ ಮಿ ಟೂ ಅಭಿಯಾನದಡಿ ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಅವರ ಪತ್ನಿ ಮಯೂರಿ ಉಪಾಧ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮ್ಮ ನಡತೆಯಲ್ಲಿ ಅಸಭ್ಯವಾಗಿ ಮತ್ತು ಅನುಚಿತವಾಗಿ ವರ್ತಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು, ಶಿಕ್ಷೆಯಾಗಲೇಬೇಕು, ಈ ಮೂಲಕವಾದರೂ ಬೇರೆ ಪುರುಷರು ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡುವ ಧೈರ್ಯ ಹೊಂದುವುದಿಲ್ಲ, ಬೇರೆ ಪುರುಷರಿಗೆ ಇದು ಪಾಠವಾಗಬೇಕು.

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರು ಮುಂದೆ ಬಂದು ಮುಕ್ತವಾಗಿ ತಮ್ಮ ನೋವನ್ನು ತೋಡಿಕೊಳ್ಳುವವರಿಗೆ ನನ್ನ ಸಂಪೂರ್ಣ ಬೆಂಬಲವಿದೆ, ಈ ವಿಷಯದಲ್ಲಿ ನಾನು ದೃಢವಾಗಿದ್ದೇನೆ. ಆದರೆ ಮಹಿಳೆಯರಿಗೆ ಈ ವಿಚಾರದಲ್ಲಿ ಅಷ್ಟೊಂದು ಧೈರ್ಯವಿದೆಯೇ ಎಂದು ನನಗೆ ಗೊತ್ತಿಲ್ಲ. ಪುರುಷನ ವಿರುದ್ಧ ಆರೋಪ ಮಾಡಲು ಮಹಿಳೆಗೆ ಸಾಕಷ್ಟು ಧೈರ್ಯ ಬೇಕು, ಅದು ಸೋಷಿಯಲ್ ಮೀಡಿಯಾ ಮೂಲಕವಾಗಿರಲಿ ಅಥವಾ ಬೇರೆ ಮಾಧ್ಯಮಗಳ ಮೂಲಕವಾಗಿರಲಿ, ಲೈಂಗಿಕ ಕಿರುಕುಳ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟವಾಗಿದೆ ಎಂದಿದ್ದಾರೆ.
ಇನ್ನು ನಿನ್ನೆ ಗಾಯಕ ರಘು ದೀಕ್ಷಿತ್, ನಾನು ನನ್ನ ಪತ್ನಿಗೆ ವಿಚ್ಛೇದನ ನೀಡುತ್ತಿದ್ದೇನೆ, ಕಳೆದ ಮೂರು ವರ್ಷಗಳಿಂದ ನಾವು ಜೊತೆಯಲ್ಲಿಲ್ಲ, ವಿಚ್ಛೇದನ ಪ್ರಕ್ರಿಯೆಯ ಕೊನೆಯ ಹಂತದಲ್ಲಿದ್ದೇವೆ, ಆಕೆ ಉತ್ತಮ ಮಹಿಳೆ, ನಾನು ಆಕೆಗೆ ಉತ್ತಮ ಪತಿಯಾಗಲಿಲ್ಲ ಎಂದು ಹೇಳಿಕೊಂಡಿದ್ದರು.

ಈ ಬಗ್ಗೆ ಕೂಡ ಪ್ರತಿಕ್ರಿಯಿಸಿರುವ ಮಯೂರಿ ಉಪಾಧ್ಯ, ನನ್ನ ಮದುವೆ ಮತ್ತು ವಿಚ್ಛೇದನ ವಿಷಯ ಇಲ್ಲಿ ಮುಖ್ಯವಲ್ಲ ಮತ್ತು ಸಾಂದರ್ಭಿಕ ಚರ್ಚೆಯ ವಿಷಯ ಕೂಡ ಅಲ್ಲ, ಪತ್ನಿಯಾಗುವುದಕ್ಕಿಂತ ಮೊದಲು ನಾನೊಬ್ಬ ಮಹಿಳೆ. ಅದು ಸೆಲೆಬ್ರಿಟಿಗಳಾಗಿರಲಿ, ಸಾಮಾನ್ಯ ವ್ಯಕ್ತಿಗಳಾಗಿರಲಿ, ಪ್ರತಿಯೊಬ್ಬ ಪ್ರಜೆಯ ಘನತೆ, ಗೌರವ ಮುಖ್ಯವಾಗುತ್ತದೆ. ಲೈಂಗಿಕ ಕಿರುಕುಳದ ಬಗ್ಗೆ ಹೇಳಿರುವ ಘಟನೆಗಳಲ್ಲಿ ಸತ್ಯವೇನು ಎಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT