ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಮಲ್ಟಿಪ್ಲೆಕ್ಸ್ ಗಳಲ್ಲಿ ಹೆಚ್ಚೆಚ್ಚು ಕನ್ನಡ ಚಿತ್ರ ಪ್ರದರ್ಶನಗೊಳ್ಳಬೇಕು: ನಟ ಶಿವರಾಜ್ ಕುಮಾರ್

ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ಗಳು ತೋರುತ್ತಿರುವ ತಾರತಮ್ಯ, ಧೋರಣೆ ವಿರುದ್ಧ ನಟ ಶಿವರಾಜ್ ಕುಮಾರ್ ಅವರು ಶುಕ್ರವಾರ ಗುಡುಗಿದ್ದಾರೆ...

ಬೆಂಗಳೂರು: ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ಗಳು ತೋರುತ್ತಿರುವ ತಾರತಮ್ಯ, ಧೋರಣೆ ವಿರುದ್ಧ ನಟ ಶಿವರಾಜ್ ಕುಮಾರ್ ಅವರು ಶುಕ್ರವಾರ ಗುಡುಗಿದ್ದಾರೆ. 
20 ರಿಂದ 25 ಹಿಂದಿ ಚಿತ್ರಗಳು ಏಕಕಾಲಕ್ಕೆ ಬಂದಲೂ ಪ್ರದರ್ಶಿಸಲು ಮಲ್ಟಿಪ್ಲೆಕ್ಸ್ ಗಳಿಗೆ ಸಮಸ್ಯೆಗಳಿರುವುದಿಲ್ಲ. ಆದರೆ, ಕನ್ನಡ ಚಿತ್ರಗಳ ವಿಚಾರದಲ್ಲಿ ಮಾತ್ರ ತಾರತಮ್ಯ ಮಾಡುತ್ತವೆ. ಯಾರು ಎಲ್ಲಿಂದಲೇ ಬಂದರೂ ನಾವು ಮುಕ್ತ ಸ್ವಾಗತ ಮಾಡುತ್ತೇವೆ. ಅದೇ ರೀತಿ ಇಲ್ಲಿಗೆ ಬಂದ ಮೇಲೆ ನಮಗೂ ಮಹತ್ವ ನೀಡಬೇಕು. 
ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇವೆ. ಎಲ್ಲಾ ಭಾಷೆಗಳ ಸಿನಿಮಾಗಳನ್ನು ಸ್ವಾಗತಿಸುತ್ತೇವೆ. ನಾವು ಯಾರಿಗೂ ಆದೇಶ ಮಾಡುತ್ತಿಲ್ಲ. ಮನವಿ ಮಾಡಿಕೊಳ್ಳುತ್ತಿದ್ದೇವೆ. ಪರಭಾಷಾ ಸಿನಿಮಾಗಳಿಗೆ ನೀಡುವಷ್ಟೇ ಮಹತ್ವವನ್ನು ನಮ್ಮ ಸಿನಿಮಾಗಳಿಗೂ ನೀಡಬೇಕು. ಕನ್ನಡ ಚಿತ್ರಗಳಿಗೆ ಸಮಸ್ಯೆಯಾದರೆ, ನಾನು ಮುಂದೆ ನಿಲ್ಲುತ್ತೇನೆ. ಬೇರೆ ಭಾಷೆಯವರು ಮಾತ್ರ ಸಿನಿಮಾ ಮಾಡ್ತಾ ಇರೋದಾ? ನಾವೇನು ಸಿನಿಮಾಗಳನ್ನು ಮಾಡುತ್ತಿಲ್ಲವಾ? ಎಲ್ಲರಿಗೂ ಒಂದೇ ರೀತಿ ನಿಯಮ ಅನುಸರಿಸಿ. ಕನ್ನಡ ಚಿತ್ರ ನೋಡುಗರ ಸಂಖ್ಯೆ ಕಡಿಮೆಯೆಂದು ಮಲ್ಟಿಪ್ಲೆಕ್ಸ್ ಗಳು ಏಕೆ ತಿಳಿಯುತ್ತಿವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT