ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಮಲ್ಟಿಪ್ಲೆಕ್ಸ್ ಗಳಲ್ಲಿ ಹೆಚ್ಚೆಚ್ಚು ಕನ್ನಡ ಚಿತ್ರ ಪ್ರದರ್ಶನಗೊಳ್ಳಬೇಕು: ನಟ ಶಿವರಾಜ್ ಕುಮಾರ್

ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ಗಳು ತೋರುತ್ತಿರುವ ತಾರತಮ್ಯ, ಧೋರಣೆ ವಿರುದ್ಧ ನಟ ಶಿವರಾಜ್ ಕುಮಾರ್ ಅವರು ಶುಕ್ರವಾರ ಗುಡುಗಿದ್ದಾರೆ...

ಬೆಂಗಳೂರು: ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ಗಳು ತೋರುತ್ತಿರುವ ತಾರತಮ್ಯ, ಧೋರಣೆ ವಿರುದ್ಧ ನಟ ಶಿವರಾಜ್ ಕುಮಾರ್ ಅವರು ಶುಕ್ರವಾರ ಗುಡುಗಿದ್ದಾರೆ. 
20 ರಿಂದ 25 ಹಿಂದಿ ಚಿತ್ರಗಳು ಏಕಕಾಲಕ್ಕೆ ಬಂದಲೂ ಪ್ರದರ್ಶಿಸಲು ಮಲ್ಟಿಪ್ಲೆಕ್ಸ್ ಗಳಿಗೆ ಸಮಸ್ಯೆಗಳಿರುವುದಿಲ್ಲ. ಆದರೆ, ಕನ್ನಡ ಚಿತ್ರಗಳ ವಿಚಾರದಲ್ಲಿ ಮಾತ್ರ ತಾರತಮ್ಯ ಮಾಡುತ್ತವೆ. ಯಾರು ಎಲ್ಲಿಂದಲೇ ಬಂದರೂ ನಾವು ಮುಕ್ತ ಸ್ವಾಗತ ಮಾಡುತ್ತೇವೆ. ಅದೇ ರೀತಿ ಇಲ್ಲಿಗೆ ಬಂದ ಮೇಲೆ ನಮಗೂ ಮಹತ್ವ ನೀಡಬೇಕು. 
ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇವೆ. ಎಲ್ಲಾ ಭಾಷೆಗಳ ಸಿನಿಮಾಗಳನ್ನು ಸ್ವಾಗತಿಸುತ್ತೇವೆ. ನಾವು ಯಾರಿಗೂ ಆದೇಶ ಮಾಡುತ್ತಿಲ್ಲ. ಮನವಿ ಮಾಡಿಕೊಳ್ಳುತ್ತಿದ್ದೇವೆ. ಪರಭಾಷಾ ಸಿನಿಮಾಗಳಿಗೆ ನೀಡುವಷ್ಟೇ ಮಹತ್ವವನ್ನು ನಮ್ಮ ಸಿನಿಮಾಗಳಿಗೂ ನೀಡಬೇಕು. ಕನ್ನಡ ಚಿತ್ರಗಳಿಗೆ ಸಮಸ್ಯೆಯಾದರೆ, ನಾನು ಮುಂದೆ ನಿಲ್ಲುತ್ತೇನೆ. ಬೇರೆ ಭಾಷೆಯವರು ಮಾತ್ರ ಸಿನಿಮಾ ಮಾಡ್ತಾ ಇರೋದಾ? ನಾವೇನು ಸಿನಿಮಾಗಳನ್ನು ಮಾಡುತ್ತಿಲ್ಲವಾ? ಎಲ್ಲರಿಗೂ ಒಂದೇ ರೀತಿ ನಿಯಮ ಅನುಸರಿಸಿ. ಕನ್ನಡ ಚಿತ್ರ ನೋಡುಗರ ಸಂಖ್ಯೆ ಕಡಿಮೆಯೆಂದು ಮಲ್ಟಿಪ್ಲೆಕ್ಸ್ ಗಳು ಏಕೆ ತಿಳಿಯುತ್ತಿವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT