ಸಂಗೀತಾ ಭಟ್ 
ಸಿನಿಮಾ ಸುದ್ದಿ

#MeToo: ಸ್ಯಾಂಡಲ್ ವುಡ್ ನ ಕರಾಳ ಅನುಭವ ಬಿಚ್ಚಿಟ್ಟ ಸಂಗೀತಾ ಭಟ್ ಚಿತ್ರರಂಗಕ್ಕೆ ಗುಡ್ ಬೈ!

ದೇಶಾದ್ಯಂತ ಬಿರುಗಾಳಿ ಎಬ್ಬಿಸಿರುವ "ಮೀಟೂ" ಅಭಿಯಾನ ಸ್ಯಾಂಡಲ್ ವುಡ್ ಗೆ ಸಹ ಹಬ್ಬಿದೆ. "ಪ್ರೀತಿ ಗೀತಿ ಇತ್ಯಾದಿ", "ಎರಡನೇ ಸಲ" ಸೇರಿ ಹಲವು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ....

ಬೆಂಗಳೂರು: ದೇಶಾದ್ಯಂತ ಬಿರುಗಾಳಿ ಎಬ್ಬಿಸಿರುವ "ಮೀಟೂ" ಅಭಿಯಾನ ಸ್ಯಾಂಡಲ್ ವುಡ್ ಗೆ ಸಹ ಹಬ್ಬಿದೆ. "ಪ್ರೀತಿ ಗೀತಿ ಇತ್ಯಾದಿ", "ಎರಡನೇ ಸಲ" ಸೇರಿ ಹಲವು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಸಂಗೀತಾ ಭಟ್ ಚಿತ್ರರಂಗದಲ್ಲಿ ತನಗಾದ ಕೆಟ್ಟ ಅನುಭವವನ್ನು ವಿವರಿಸಿದ್ದು ತಾವು ಚಿತ್ರರಂಗವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ.
ಹೌದು ನಟಿ ಸಂಗೀತಾ ಭಟ್ ಸ್ಯಾಂಡಲ್ ವುಡ್ ನಲ್ಲಿ ತಮಗಾದ ಅನುಭವಗಳನ್ನು ಮೂರು ಪುಟಗಳ ವಿವರಣೆ ನೀಡಿ ಚಿತ್ರರಂಗಕ್ಕೆ ಗುಡ್ ಬೈ ಎಂದಿದ್ದಾರೆ. ತಮ್ಮ ಹದಿನೈದನೇ ವಯಸ್ಸಿನಿಂದ ಇಲ್ಲಿಯವರೆಗೆ ತಾವು ಅನುಭವಿಸಿದ ಲೈಂಗಿಕ ಕಿರುಕುಳ, ದೌರ್ಜನ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಹತ್ತನೇ ತರಗತಿಯಲ್ಲಿದ್ದಾಗ ಸಂಗೀತಾ ತಂದೆ ತೀರಿ ಹೋಗಿದ್ದು ಆ ಬಳಿಕ ಹೊಟ್ಟೆಪಾಡಿಗಾಗಿ ಚಿತ್ರರಂಗದತ್ತ ಆಗಮಿಸಿದ ನಟಿ ಎದುರಿಸಿದ್ದ ಕರಾಳ ಅನುಭವಗಳು ಒಂದೆರಡಲ್ಲ. ನಿರ್ದೇಶಕ, ನಟ ಸೇರಿ ಚಿತ್ರತಂಡದ ಹಲವರು ತನಗೆ ಕಿರುಕುಳ ನಿಡಿದ್ದಾರೆ. ನಾನು ಎಷ್ಟೋ ಚಿತ್ರಗಳಲ್ಲಿ ಅಭಿನಯಿಸಿದ್ದು ಆ ಚಿತ್ರಗಳು ತೆರೆಗೆ ಬರಲೇ ಇಲ್ಲ, ಹೀಗಾಗಿ ಆ ಚಿತ್ರಕ್ಕಾಗಿನ ನನ್ನ ಸಂಭಾವನೆ ಇನ್ನೂ ದೊರಕಿಲ್ಲ ಎಂದು ನಟಿ ವಿವರಿಸಿದ್ದಾರೆ.
ಹದಿನೈದನೇ ವರ್ಷಗಳಿಂದಲೇ ಆಡಿಷನ್ ಕೊಡಲು ಪ್ರಾರಂಭಿಸಿದ ನನ್ನನ್ನು ಅಂದಿನಿಂದ ಇಂದಿನವರೆಗೆ ಚಿತ್ರರಂಗ ಹೀನಾಯವಾಗಿ ನಡೆಸಿಕೊಂಡಿದೆ ಎನ್ನುವ ನಟಿ "ವಿಷಯವನ್ನು ಯಾರ ಬಳಿ ಹೇಳಬೇಡ" ಎಂದು ಹಲವರು ನನಗೆ ಹೇಳಿದ್ದರು ಎಂದೂ ಸೇರಿಸಿದ್ದಾರೆ.
"ನಾನು ಇದಾಗಲೇ ಚಿತ್ರರಂಗದಿಂದ ದೂರವಾಗಿದ್ದು ಯಾವುದೇ ರೀತಿಯ ಪ್ರಚಾರ ಅಥವಾ ಮತ್ತೆ ಅವಕಾಶ ದಿರಕಬಹುದೆನ್ನುವ ಕಾರಣಕ್ಕೆ ಇವನ್ನೆಲ್ಲ ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ. ನನ್ನ ಮನಸ್ಸಿನಲ್ಲಿರುವ ಸಂಕಟವನ್ನು ಹೆಚ್ಚು ಸಮಹ ಅದುಮಿಕೊಳ್ಳಲು ನನಗೆ ಸಾಧ್ಯವಾಗದ ಕಾರಣ ಎಲ್ಲವನ್ನೂ ಇಲ್ಲಿ ಬರೆದಿದ್ದೇನೆ" ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT