ನಟ ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಬರ್ತ್ ಡೇ ಕಟೌಟ್: ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ ಬಿಬಿಎಂಪಿ

ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ರಸ್ತೆಯಲ್ಲಿ ಕಟೌಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಬೆಂಗಳೂರು: ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ರಸ್ತೆಯಲ್ಲಿ ಕಟೌಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ಧ್ರುವ ಸರ್ಜಾ ವಿರುದ್ಧ ಬನಶಂಕರಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ತಾರಾನಾಥ್ ಅವರು ದೂರು ದಾಖಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 
ಧ್ರುವ ಸರ್ಜಾ ವಿರುದ್ದ ದೂರು ದಾಖಲಾಗಿಲ್ಲ. ಕಟೌಟ್ ನಲ್ಲಿ ಧ್ರುವ ಸರ್ಜಾ ಅವರ ಫೋಟೋ ಇದ್ದ ಕಾರಣ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
ಧ್ರುವ ಸರ್ಜಾ ಅವರು ಹೇಳಿಕೆ ನೀಡಿದ ಬಳಿಕ ಯಾರು ಈ ಕಟೌಟ್ ಅಳವಡಿಸಿದ್ದರೂ ಎಂಬುದನ್ನು ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬನಶಂಕರಿ ಪೊಲೀಸರು ತಿಳಿಸಿದ್ದಾರೆ. 
ವಾರ್ಡ್ ಸಂಖ್ಯೆ 167ರಲ್ಲಿ ಬರುವ ಕೆ.ಆರ್.ರಸ್ತೆ ಮತ್ತು ಶಾಸ್ತ್ರಿ ನಗರ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಧ್ರುವ ಸರ್ಜಾ ಅವರ ಸುಮಾರು 20 ಅಡಿಯ ಕಟೌಟ್ ಹಾಕಲಾಗಿದೆ. 
ಅಭಿಮಾನಿಗಳು ಕಟೌಟ್ ಹಾಕಿದ್ದಾರೆಂದು ತಿಳಿದುಬಂದಿತ್ತು. ಬಿಬಿಎಂಪಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ ಬಳಿಕ ಕಟೌಟ್ ಗಳನ್ನು ತೆಗೆಯಲಾಯಿತು. ಈಗೇಕೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆಂಬುದು ನನಗೆ ಗೊತ್ತಿಲ್ಲ ಎಂದು ನಟ ಧ್ರುವ ಸರ್ಜಾ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT