ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ರಾಜ್ಯಾದ್ಯಂತ ದಿ ವಿಲನ್ ಬಿಡುಗಡೆ, ನಕಲಿ ಟಿಕೆಟ್ ಬಳಸಿ ಸಿಕ್ಕ ಬಿದ್ದ ದುಷ್ಕರ್ಮಿಗಳು!

ನಟ ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದಿ ವಿಲನ್ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಅಭೂತಪೂರ್ವ ಆರಂಭ ದೊರೆತಿದೆ. ಅಂತೆಯೇ ಚಿತ್ರಕ್ಕೆ ನಕಲಿ ಟಿಕೆಟ್ ಗಳ ಹಾವಳಿ ಕೂಡ ಶುರುವಾಗಿದೆ.

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದಿ ವಿಲನ್ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಅಭೂತಪೂರ್ವ ಆರಂಭ ದೊರೆತಿದೆ. ಅಂತೆಯೇ ಚಿತ್ರಕ್ಕೆ ನಕಲಿ ಟಿಕೆಟ್ ಗಳ ಹಾವಳಿ ಕೂಡ ಶುರುವಾಗಿದೆ.
ಬಹು ನಿರೀಕ್ಷಿತ 'ದಿ ವಿಲನ್' ಚಿತ್ರ ವೀಕ್ಷಿಸಲು ನೂರಕ್ಕೂ ಹೆಚ್ಚು ನಕಲಿ ಟಿಕೆಟ್​ ಬಳಸಿ ಚಿತ್ರಮಂದಿರ ಪ್ರವೇಶಿಸಿದ್ದ ಪ್ರೇಕ್ಷರನ್ನು ಥಿಯೇಟರ್​ ಸಿಬ್ಬಂದಿ ಹೊರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. 
ಚಾಮರಾಜನಗರದ ರಾಘವೇಂದ್ರ ಚಿತ್ರಮಂದಿರದಲ್ಲಿ ಬೆಳಗ್ಗೆ ಏಳು ಗಂಟೆಗೆ ಸಿನಿಮಾ ಪ್ರದರ್ಶನವನ್ನು ಪ್ರಾರಂಭಿಸಲಾಗಿತ್ತು. ಸಾಗರೋಪಾಧಿಯಲ್ಲಿ ಸುದೀಪ್​ ಹಾಗೂ ಶಿವರಾಜ್​ ಕುಮಾರ್​ ಅಭಿಮಾನಿಗಳು ಹರಿದು ಬಂದಿದ್ದರು. ಚಿತ್ರಮಂದಿರ ಕಿಕ್ಕಿರಿದು ತುಂಬಿದನ್ನು ಬಂಡವಾಳವನ್ನಾಗಿಸಿಕೊಂಡ ಕೆಲವರು ಟಿಕೆಟ್ ಅನ್ನು ಕಲರ್​ ಜೆರಾಕ್ಸ್​ ಮಾಡಿಸಿಕೊಂಡು ಚಿತ್ರಮಂದಿರ ಪ್ರವೇಶಿಸಿದ್ದಾರೆ. 
ಈ ಬಗ್ಗೆ ಥಿಯೇಟರ್​ ಸಿಬ್ಬಂದಿಯ ಗಮನಕ್ಕೆ ಬಂದ ಕೂಡಲೇ ಎಲ್ಲಾ ನಕಲಿ ಟಿಕೆಟ್​ಗಳನ್ನು ಪಡೆದು ಹೊರದಬ್ಬಿದ್ದಾರೆ. ಅಂತೆಯೇ ಚಿತ್ರಮಂದಿರದ ಬಳಿ ನೂಕು ನುಗ್ಗಲು ಉಂಟಾಗಿದ್ದರಿಂದ ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT