ಅರ್ಜುನ್ ಸರ್ಜಾ-ನಟಿ 
ಸಿನಿಮಾ ಸುದ್ದಿ

ಆ್ಯಕ್ಷನ್ ಕಿಂಗ್‌ಗೆ ಮತ್ತೊಂದು ಸಂಕಷ್ಟ: ನಟಿ ಶ್ರುತಿ ನಂತರ ಮತ್ತೊಬ್ಬ ನಟಿಯಿಂದ #MeToo ಆರೋಪ!

ಬಹುಭಾಷಾ ನಟಿ ಶ್ರುತಿ ಹರಿಹರನ್ ಅವರು ಮೊನ್ನೆಯಷ್ಟೇ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದು ಇದರ ಬೆನ್ನಲ್ಲೇ ಮತ್ತೊಂದು ನಟಿ ಸಹ ಅರ್ಜುನ್...

ಬೆಂಗಳೂರು: ಬಹುಭಾಷಾ ನಟಿ ಶ್ರುತಿ ಹರಿಹರನ್ ಅವರು ಮೊನ್ನೆಯಷ್ಟೇ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದು ಇದರ ಬೆನ್ನಲ್ಲೇ ಮತ್ತೊಂದು ನಟಿ ಸಹ ಅರ್ಜುನ್ ವಿರುದ್ಧ ಆರೋಪ ಮಾಡಿದ್ದಾರೆ. 
ನಟಿ ತಮ್ಮ ಹೆಸರನ್ನು ಗೌಪ್ಯವಾಗಿಟ್ಟು ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದಾರೆ. ಸರ್ಜಾ ಅವರೊಂದಿಗೆ ನಾನು ಒಂದು ಸಿನಿಮಾದಲ್ಲಿ ಅಭಿನಯಿಸಿದ್ದೇನೆ. ನನ್ನ ನಂಬರ್ ಗೆ ಅರ್ಜುನ್ ಸರ್ಜಾ ಕಾಲ್ ಮಾಡುತ್ತಿದ್ದರು. ಅದನ್ನು ನಾನು ಅವೈಡ್ ಮಾಡುತ್ತಿದ್ದು, ಅವರ ಮಗಳಿಗಿಂತಲೂ ಚಿಕ್ಕ ವಯಸ್ಸು ನಂದು. ಅವರು ಸಿಕ್ಕಾಗಲೆಲ್ಲ ಇರಿಸು ಮುರಿಸಾಗುತ್ತಿತ್ತು. ಶ್ರುತಿ ಹರಿಹರನ್ ಮಾಡಿರುವ ಆರೋಪವನ್ನು ನಾನು ಒಪ್ಪುತ್ತೇನೆ ಎಂದು ಅನಾಮಧೇಯ ನಟಿ ಆರೋಪ ಮಾಡಿದ್ದಾರೆ. 
ವೈಯಕ್ತಿಕ ಕಾರಣಗಳಿಂದಾಗಿ ನಾನು ನನ್ನ ಹೆಸರನ್ನು ಗೌಪ್ಯವಾಗಿಟ್ಟಿದ್ದೇನೆ. ನಾನು ಒಂದು ಸಿನಿಮಾದಲ್ಲಿ ಅರ್ಜುನ್ ಸರ್ಜಾ ಜೊತೆಗೆ ಕೆಲಸ ಮಾಡಿದ್ದೇನೆ. ಸಹಾಯಕ ನಿರ್ದೇಶಕನಿಂದ ನನ್ನ ಮೊಬೈಲ್ ನಂಬರ್ ಪಡೆದ ಸರ್ಜಾ ನನ್ನನ್ನು ಸಂಪರ್ಕಿಸಿ, ಮುಂದಿನ ತಮ್ಮ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುವಂತೆ ಹಾಗೂ ಆ ಬಗ್ಗೆ ಚರ್ಚೆ ಮಾಡೋಣ ಎಂದು ಹೇಳಿದ್ದರು. 
ಇದಾದ ನಂತರ ಪದೇ ಪದೇ ಕಾಲ್ ಮಾಡುವುದು, ಮೆಸೇಜ್ ಮಾಡುತ್ತಿದ್ದರು. ಇದು ನನಗೆ ಇರಿಸು ಮುರಿಸು ಉಂಟು ಮಾಡುತ್ತಿತ್ತು. ನಾನು ಒಮ್ಮೆ ಅರ್ಜುನ್ ಸರ್ಜಾ ಅವರಿಗೆ ನಿಮ್ಮ ಮಗಳಿಗಿಂತ ಚಿಕ್ಕ ವಯಸ್ಸಿನವಳು ನಾನು ಎಂದು ಹೇಳಿ ಅವರ ಮೆಸೇಜ್ ಮತ್ತು ಕಾಲ್ ಗಳನ್ನು ಆದಷ್ಟು ನಿಯಂತ್ರಿಸಲು ನಿರ್ಧರಿಸಿದ್ದೆ. ಏಕೆಂದರೆ ಈ ಪ್ರಕರಣವನ್ನು ಹೇಗೆ ನಿಭಾಯಿಸಬೇಕು ಎಂಬುದು ತಿಳಿಯದೇ ಸುಮ್ಮನಾಗಿದ್ದೇ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಕನ್ನಡದ ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ನನ್ನೊಂದಿಗೆ ಅಸಭ್ಯ ವರ್ತನೆ ತೋರಿದ್ದರು ಎಂದು ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!