ನಟ ರಾಜೇಶ್ ಮತ್ತು ಅರ್ಜುನ್ ಸರ್ಜಾ 
ಸಿನಿಮಾ ಸುದ್ದಿ

ಧೈರ್ಯ ಇಲ್ಲ ಅಂದ್ರೆ ಮನೇಲಿ ಕುಳಿತುಕೊಳ್ಳಿ, #ಮೀಟೂ ಬಂದ ಮೇಲೆ ನಿಮಗೆಲ್ಲಾ ರೆಕ್ಕೆ ಪುಕ್ಕ ಬಂತಾ: ನಟ ರಾಜೇಶ್ ಆಕ್ರೋಶ

ನಟ ಹಾಗೂ ತಮ್ಮ ಅಳಿಯ ಅರ್ಜುನ್ ಸರ್ಜಾ ಅವರ ಬೆಂಬಲಕ್ಕೆ ಮತ್ತೊಮ್ಮೆ ಹಿರಿಯ ನಟ ರಾಜೇಶ್ ನಿಂತಿದ್ದು, ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿದ್ದ ಗೃಹಿಣಿಯ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು: ನಟ ಹಾಗೂ ತಮ್ಮ ಅಳಿಯ ಅರ್ಜುನ್ ಸರ್ಜಾ ಅವರ ಬೆಂಬಲಕ್ಕೆ ಮತ್ತೊಮ್ಮೆ ಹಿರಿಯ ನಟ ರಾಜೇಶ್ ನಿಂತಿದ್ದು, ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿದ್ದ ಗೃಹಿಣಿಯ ವಿರುದ್ಧ ಕಿಡಿಕಾರಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿದ್ದ ಮಹಿಳೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಟ ರಾಜೇಶ್, 15 ವರ್ಷ ಈ ಘಟನೆ ನಡೆದಿದೆ. ಆಗ ಪೊಲೀಸರಿಗೆ, ಕಲಾವಿದರ ಸಂಘದವರಿಗೆ ಮತ್ತು ಚೇಂಬರಿಗೆ ದೂರು ಕೊಡಬಹುದಿತ್ತು. ಆಗ ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನೆ ಕೇಳಿದ್ದಾರೆ. 
'ಶೂಟಿಂಗ್ ನಲ್ಲಿ ನಿರ್ದೇಶಕರು, ನಿರ್ಮಾಪಕರು ಇರುತ್ತಾರೆ. ಅವರ ಬಳಿ ಹೋಗಿ ನನ್ನ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ದೂರ ಕೊಡಬೇಕಿತ್ತು ಎಂದರು. ಈ ವೇಳೆ ಗೃಹಿಣಿ ಆಗ ನನಗೆ ಧೈರ್ಯ ಇರಲಿಲ್ಲ ಎಂದು ಹೇಳಿದರು. ಈ ವೇಳೆ ಗೃಹಿಣಿ ವಿರುದ್ಧ ಗರಂ ಆದ ರಾಜೇಶ್ ಅವರು ಧೈರ್ಯ ಇಲ್ಲ ಎಂದ ಮೇಲೆ ಚಿತ್ರರಂಗಕ್ಕೆ ಯಾಕೆ ಬಂದ್ರಿ, ಮನೆಯಲ್ಲಿ ಇರಬೇಕು. #ಮೀಟೂ ಬಂದ ಮೇಲೆ ನಿಮಗೆಲ್ಲಾ ರೆಕ್ಕೆ ಪುಕ್ಕ ಬಂತಾ. ಇದಕ್ಕೆ ಮುಂಚೆ ಎಲ್ಲಿ ಹೋಗಿತ್ತು ನಿಮ್ಮ ರೆಕ್ಕೆ ಪುಕ್ಕ. #ಮೀಟೂ ಬಂದು ಅವಕಾಶ ಕಲ್ಪಿಸಿಕೊಟ್ಟಿದೆ. ಇದಕ್ಕೆ ಮುಂಚೆ ಎಲ್ಲಿ ಹೋಗಿತ್ತು ಎಂದು ಗೃಹಿಯ ವಿರುದ್ಧ ಗುಡುಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

Ganesh Chaturthi ಎಫೆಕ್ಟ್; ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT