ಶ್ರುತಿ ಹರಿಹರನ್, ಅರ್ಜುನ್ ಸರ್ಜಾ, ರಾಜೇಶ್ 
ಸಿನಿಮಾ ಸುದ್ದಿ

#MeToo: ನಟಿ ಶ್ರುತಿ ಹರಿಹರನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹಿರಿಯ ನಟ ರಾಜೇಶ್ ದೂರು

ಲೂಸಿಯಾ ಖ್ಯಾತಿಯ ನಟಿ ಶ್ರುತಿ ಹರಿಹರನ್ #MeToo ಅಭಿಯಾನದಲ್ಲಿ ದಕ್ಷಿಣ ಭಾರತದ ಖ್ಯಾತ ನಟ, ಕನ್ನಡಿಗ ಅರ್ಜುನ್ ಸರ್ಜಾ ವಿರುದ್ಧ ಮಾಡಿದ ಲೈಂಗಿಕ ಕಿರುಕುಳ ಆರೋಪ ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪರ- ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ.

ಬೆಂಗಳೂರು: ಲೂಸಿಯಾ ಖ್ಯಾತಿಯ ನಟಿ ಶ್ರುತಿ ಹರಿಹರನ್ #MeToo ಅಭಿಯಾನದಲ್ಲಿ  ದಕ್ಷಿಣ ಭಾರತದ ಖ್ಯಾತ ನಟ, ಕನ್ನಡಿಗ ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪ ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪರ- ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ.

ಚಿತ್ರೋದ್ಯಮದ ಅನೇಕ ನಟ, ನಟಿಯರು, ನಿರ್ಮಾಪಕ ಹಾಗೂ ನಿರ್ದೇಶಕರು ಅರ್ಜುನ್ ಸರ್ಜಾ  ಬೆಂಬಲಿಸಿದ್ದರೆ ಮತ್ತೆ ಕೆಲವರು ನಟಿ ಶ್ರುತಿ ಹರಿಹರನ್ ಪರ ನಿಂತಿದ್ದು, ವಿವಾದ ಇದೀಗ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲು ಹತ್ತಿದೆ.

ನಟ ಅರ್ಜುನ್ ಸರ್ಜಾ ಪರ ಅವರ ಮಾವ ಹಿರಿಯ ನಟ ರಾಜೇಶ್ , ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೆಗೌಡರನ್ನು ಭೇಟಿ ಮಾಡಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ದೂರು  ಸಲ್ಲಿಸಿದರು.

 ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್, ಚಿತ್ರರಂಗದಲ್ಲಿ ಮಡಿವಂತಿಕೆ, ಮೈಲಿಗೆ  ಇಲ್ಲ, ಆಳಿಯ ಅರ್ಜುನ್ ಸರ್ಜಾ ವಿರುದ್ಧ ಆರೋಪ ಬಂದ ಹಿನ್ನೆಲೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದೇನೆ. ಈ ವಿಚಾರದಲ್ಲಿ ಅದು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು.

ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಮಾತನಾಡಿ,  ರಾಜೇಶ್ ಸಲ್ಲಿಸಿರುವ ದೂರಿನ ಸಂಬಂಧ ಇಂದು ಸಂಜೆ ತುರ್ತು ಸಭೆ ನಡೆಸಲಾಗುವುದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನಾ ಮಾತನಾಡಿದ ರಾಜೇಶ್,  ಪ್ರೇಮ ಬರಹ ಚಿತ್ರದಲ್ಲಿನ ನಾಯಕನಾಗಿ ಮೊದಲಿಗೆ  ಮೈನಾ ಖ್ಯಾತಿಯ ನಟ ಚೇತನ್ ಅವರನ್ನು  ಆಯ್ಕೆ ಮಾಡಲಾಗಿತ್ತು. ಆದರೆ, ತದನಂತರ ಅವರ ಬದಲಿಗೆ ಮತ್ತೊಬ್ಬರನ್ನು ನಾಯಕನಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು, ಇದರ ಸೇಡು ತೀರಿಸಿಕೊಳ್ಳುವ ಸಲುವಾಗಿ ಚೇತನ್ ಶ್ರುತಿ ಹರಿಹರನ್ ಪರ ನಿಂತಿರುವುದಾಗಿ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT