ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಮತ್ತೊಂದು #MeToo, ತಿಥಿ ಚಿತ್ರದ ಬರಹಗಾರ ಈರೇಗೌಡ ವಿರುದ್ಧ ಯುವತಿಯಿಂದ ಗಂಭೀರ ಆರೋಪ

ನಟ ಅರ್ಜುನ್ ಸರ್ಜಾ ವಿರುದ್ಧ ಕೇಳಿಬಂದಿರುವ ಮೀಟೂ ಆರೋಪ ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ ಇದೀಗ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಮೀಟೂ ಆರೋಪ ಕೇಳಿಬಂದಿದೆ.

ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಕೇಳಿಬಂದಿರುವ ಮೀಟೂ ಆರೋಪ ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ ಇದೀಗ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಮೀಟೂ ಆರೋಪ ಕೇಳಿಬಂದಿದೆ.
ಈ ಹಿಂದೆ ತಿಥಿ ಚಿತ್ರದ ಮೂಲಕ ಭಾರಿ ಪ್ರಶಂಸೆ ಗಿಟ್ಟಿಸಿದ್ದ ಬರಹಗಾರ ಈರೇಗೌಡ ವಿರುದ್ಧ ಇದೀಗ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯದ ಆರೋಪ ಮಾಡುತ್ತಿದ್ದು, ಕೆಲಸ ಕೇಳಿ ಹೋಗಿದ್ದ ತನನ್ನು ಈರೇಗೌಡ ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದರು ಎಂದು ಯುವತಿ ಆರೋಪಿಸಿದ್ದಾಳೆ.
ಈ ಬಗ್ಗೆ ಏಕ್ತಾ ಎಂಬ ಯುವತಿ ತನ್ನ ಪೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಸಂಭಾಷಣೆಕಾರಳಾಗಬೇಕು ಎಂಬ ಆಸೆಯೊಂದಿಗೆ ಈರೇಗೌಡರ ಬಳಿ ಸೇರಿಕೊಂಡಿದ್ದೆ. ಆದರೆ ಈರೇಗೌಡ ತನ್ನ ಗೆಳೆಯನ ಮನೆಗೆ ಕರೆಸಿಕೊಂಡು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದ ಎಂದು ಏಕ್ತಾ ತನ್ನ ಪೇಸ್ ಬುಕ್ ನಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದಾರೆ.
ಇನ್ನು 'ತಿಥಿ' ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ ಈರೇಗೌಡ ಬಳಿಕ ಬಳೆ ಮಾರುವವರ ಕಥೆ ಹೇಳುವ ‘ಬಳೆಕೆಂಪ’ ಚಿತ್ರದ ಮೂಲಕ ಮತ್ತೊಮ್ಮೆ ಸದ್ದು ಮಾಡಿದ್ದರು. 'ಬಳೆಕೆಂಪ' ಧರ್ಮಶಾಲಾ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರದರ್ಶನದ ಗೌರವ ಪಡೆದುಕೊಂಡಿತ್ತು. 'ಜಿಯೋ ಮಾಮಿ ಮುಂಬೈ ಫಿಲಂ ಫೆಸ್ಟಿವಲ್‌'ನ ಇಂಡಿಯಾ ಗೋಲ್ಡ್‌ ವಿಭಾಗ ಮತ್ತು ಲಿಂಗ ಸಮಾನತೆಗೆ ಸಂಬಂಧಿಸಿದ ವಿಭಾಗದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈವರೆಗೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ 12 ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು.
ಮೀಟೂ ಆರೋಪ ಕೇಳಿ ಬರುತ್ತಿದ್ದಂತೆಯೇ 'ಬಳೆಕೆಂಪ'ನಿಗೆ ಧರ್ಮಶಾಲಾದಿಂದ ಗೇಟ್‌ಪಾಸ್ ಸಿಕ್ಕಿದೆ. 'ಜಿಯೋ ಮಾಮಿ' ಚಿತ್ರೋತ್ಸವಕ್ಕೂ ದೂರು ಸಲ್ಲಿಸಲು ಮಹಿಳಾ ಪರ ಹೋರಾಟಗಾರರು ನಿರ್ಧರಿಸಿದ್ದಾರೆ. ಫೈರ್ (ಫಿಲ್ಮ್ ಇಂಡಸ್ಟ್ರಿ ಫಾರ್ ಈಕ್ವಾಲಿಟಿ ಅಂಡ್ ರೈಟ್ಸ್‌) ಸಂಸ್ಥೆಗೆ ಸಂತ್ರಸ್ಥೆಯ ಪರವಾಗಿ ದೂರು ನೀಡಲು ಕೆಲವರು ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT