ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

#MeToo: ಶೃತಿ ಹರಿಹರನ್ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದರೆ ಮಾತ್ರ ಸಂಧಾನ ಎಂದ ಅರ್ಜುನ್ ಸರ್ಜಾ: ವರದಿ

ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿರುವ #MeToo ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನಸಭೆ ನಡೆಯಲಿದ್ದು, ನಾಳಿನ ಸಭೆಗ ನಟ ಅರ್ಜುನ್ ಸರ್ಜಾ ಕೂಡ ಭಾಗಿಯಾಗಲಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿರುವ #MeToo ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನಸಭೆ ನಡೆಯಲಿದ್ದು, ನಾಳಿನ ಸಭೆಗ ನಟ ಅರ್ಜುನ್ ಸರ್ಜಾ ಕೂಡ ಭಾಗಿಯಾಗಲಿದ್ದಾರೆ.
ಇನ್ನು ವರದಿಯೊಂದರ ಅನ್ವಯ ನಟ ಅರ್ಜುನ್ ಸರ್ಜಾ ಸಂಧಾನ ಸಭೆಗೆ ಭಾಗಿಯಾಗುವ ಕುರಿತು ನಿರ್ಧರಿಸಿದ್ದಾರೆಯಾದರೂ, ನಟಿ ಶೃತಿ ಹರಿಹರನ್ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಲಿಖಿತ ರೂಪದಲ್ಲಿ ಬೇಷರತ್ ಕ್ಷಮೆ ಕೇಳಬೇಕು. ಆಗ ಮಾತ್ರ ತಾವು ಸಂಧಾನಕ್ಕೆ ಒಪ್ಪುವುದಾಗಿ ನಟ ಅರ್ಜುನ್ ಸರ್ಜಾ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲವಾದಲ್ಲಿ ತಾವು ಖಂಡಿತಾ ಕಾನೂನು ಕ್ರಮ ಜರುಗಿಸುವುದಾಗಿ ಅರ್ಜುನ್ ಸರ್ಜಾ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ನಾಳೆ ನಡೆಯಲಿರುವ ಸಭೆಗೆ ನಟ ಅಂಬರೀಷ್ ನೇತೃತ್ವ ವಹಿಸಿದ್ದು, ನಾಳಿನ ಸಭೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು, ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಹಿರಿಯ ನಟ ರಾಜೇಶ್ ಸೇರಿದಂತೆ ಹಲವು ನಿರ್ಮಾಪಕ ಮತ್ತು ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT