ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ವಿರುದ್ಧದ #MeToo ಆರೋಪಕ್ಕೆ 'ಆಂಜನೇಯ' ಕಾರಣನಂತೆ..!, ಇಷ್ಟಕ್ಕೂ ಸಂಬರಗಿ ಹೇಳಿದ್ದೇನು?

ಇಡೀ ಭಾರತೀಯ ಚಿತ್ರರಂಗವೇ ನಿಬ್ಬೆರಗಾಗುವಂತೆ ಮಾಡಿರುವ ನಟ ಅರ್ಜುನ್ ಸರ್ಜಾ ವಿರುದ್ಧದ ಸ್ಯಾಂಡಲ್ ವುಡ್ ಮೀಟೂ ಪ್ರಕರಣಕ್ಕೆ 'ಆಂಜನೇಯ' ಕಾರಣನಂತೆ..

ಬೆಂಗಳೂರು: ಇಡೀ ಭಾರತೀಯ ಚಿತ್ರರಂಗವೇ ನಿಬ್ಬೆರಗಾಗುವಂತೆ ಮಾಡಿರುವ ನಟ ಅರ್ಜುನ್ ಸರ್ಜಾ ವಿರುದ್ಧದ ಸ್ಯಾಂಡಲ್ ವುಡ್ ಮೀಟೂ ಪ್ರಕರಣಕ್ಕೆ 'ಆಂಜನೇಯ' ಕಾರಣನಂತೆ..
ಹೌದು.. ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ ಮೀಟೂ ಆರೋಪ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಭಾರಿ ವಿವಾದಕ್ಕೆ ಕಾರಣವಾಗಿರುವ ಈ ಪ್ರಕರಣಕ್ಕೆ ನಟ ಅರ್ಜುನ್ ಸರ್ಜಾ ನಿರ್ಮಿಸುತ್ತಿರುವ ಆಂಜನೇಯ ಸ್ವಾಮಿ ದೇಗುಲವೇ ಕಾರಣ ಎನ್ನಲಾಗುತ್ತಿದೆ.
ಈ ಬಗ್ಗೆ ಅರ್ಜುನ್ ಸರ್ಜಾ ಆಪ್ತ ಮತ್ತು ಉದ್ಯಮಿ ಪ್ರಶಾಂತ್ ಸಂಬರಗಿ ಮಾಹಿತಿ ನೀಡಿದ್ದು, ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿದ ಸಂಬರಗಿ ಅರ್ಜುನ್ ವಿರುದ್ಧದ ಆರೋಪದ ಹಿಂದೆ ಹಿಂದೂ ವಿರೋಧಿ ಸಂಘಟನೆಗಳಿವೆ ಎಂದು ಪ್ರಶಾಂತ್ ಗಂಭೀರ ಆರೋಪ ಮಾಡಿದ್ದಾರೆ.
ಇಷ್ಟಕ್ಕೂ ಪ್ರಶಾಂತ್ ಹೇಳಿದ್ದೇನು..?
ತಮಿಳುನಾಡಿನಲ್ಲಿ ಅರ್ಜುನ್ ಸರ್ಜಾ ಅವರು ನಿರ್ಮಿಸುತ್ತಿರುವ ಅತಿ ಎತ್ತರದ ಆಂಜನೇಯ ಸ್ವಾಮಿ ದೇವಾಲಯವೇ ಇಡೀ ಪ್ರಕರಣಕ್ಕೆ ಮೂಲ ಕಾರಣವಾಗಿದ್ದು, ಅರ್ಜುನ್ ಸರ್ಜಾ ಅವರ ಹಿಂದೂಪರ ಕಾಳಜಿ ಹಾಗೂ ಅವರು ಕಟ್ಟಿಸುತ್ತಿರುವ ಗೋಶಾಲೆಗಳು ಹಾಗೂ ಆಂಜನೇಯಸ್ವಾಮಿ ದೇವಾಲಯ ಹಾಗೂ ಅವರು ಮೋದಿ ಪರವಾಗಿ ಮಾತನಾಡುತ್ತಿರುವುದರಿಂದ, ಅಮೆರಿಕಾದಿಂದ ಶೃತಿ ಹರಿಹರನ್ ಗೆ ಹಣ ಸಂದಾಯವಾಗಿದೆ.. ಹೀಗಾಗಿ ದುಡ್ಡು ಪಡೆದು ಶೃತಿ ಈ ಕೆಲಸ ಮಾಡಿದ್ದಾರೆ ಎಂದು ಪ್ರಶಾಂತ್ ಶೃತಿ ವಿರುದ್ಧ ದಾಖಲಾಗಿರುವ ಎಫ್‌ ಐಆರ್ ಅನ್ನು ತೋರಿಸಿದ್ದಾರೆ.
ಕನ್ನಡದ ಇಬ್ಬರ ನಟರ ಕೈವಾಡ
ಇನ್ನು ಪ್ರಕರಣದಲ್ಲಿ ಕನ್ನಡದ ಇಬ್ಬರು ನಟರ ಕೈವಾಡವಿದ್ದು, ಒಬ್ಬನಟನ ಬ್ಯಾಂಕ್ ಖಾತೆಯಿಂದ ಶೃತಿ ಅವರಿಗೆ ಹಣ ಸಂದಾಯವಾಗಿರುಯವ ದಾಖಲೆಯನ್ನೂ ಕೂಡ ಅರ್ಜುನ್ ಸರ್ಜಾ ಅವರ ಕಡೆಯವರು ತೋರಿಸುತ್ತಿದ್ದಾರೆ. ಸದ್ಯ ಯಾವ ಯಾವ ನಟರು ಎಂದು ಬಹಿರಂಗ ಪಡಿಸಲು ಪ್ರಶಾಂತ್ ನಿರಾಕರಿಸಿದ್ದಾರೆ. 
ಅರ್ಜುನ್ ಸರ್ಜಾ ಅವರ ಬಗ್ಗೆ ಕೆಟ್ಟ ಭಾವನೆ ಮೂಡಿಸಲೆಂದೇ ಈ ರೀತಿಯಾದ ಕೆಲಸ ಮಾಡಲಾಗುತ್ತಿದ್ದು, ಅಷ್ಟೇ ಅಲ್ಲದೇ ಶೃತಿ ಹರಿಹರನ್ ಅವರ ಫೇಸ್‌ಬುಕ್ ಅಕೌಂಟ್ ಹೊರದೇಶಗಳಿಂದ ಆಪರೇಟ್ ಆಗುತ್ತಿದೆ. ಹಿಂದೂ ಭಾವನೆಗಳನ್ನು ಧಕ್ಕೆ ಮಾಡುವುದು, ಅರ್ಜುನ್ ಸರ್ಜಾ ಅವರ ಫ್ಯಾಮಿಲಿಗೆ ಶಾಂತಿ ಭಂಗ ಮಾಡುವುದು.. ಅರ್ಜುನ್ ಸರ್ಜಾ ಅವರ ಮೇಲೆ ಕೆಟ್ಟ ಹೆಸರು ತರುವುದೇ ಇದೆಲ್ಲದರ ಉದ್ದೇಶ ಎಂದು ಪ್ರಶಾಂತ್ ಗಂಭೀರ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT