ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

'1.5 ಕೋಟಿ ಕೊಡಿ, ಸಂಧಾನ ಮಾಡಿಸುತ್ತೇನೆ': ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಅಪರಿಚಿತನಿಂದ ಕರೆ?

ಸ್ಯಾಂಡಲ್ ವುಡ್ ಮೀಟೂ ಪ್ರಕರಣ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವಂತೆಯೇ ವಿವಾದದ ನಡುವೆಯೇ ಅಪರಿಚಿತ ವ್ಯಕ್ತಿಯೋರ್ವ ಇಬ್ಬರ ಜಗಳವನ್ನು ಲಾಭ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಮೀಟೂ ಪ್ರಕರಣ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವಂತೆಯೇ ವಿವಾದದ ನಡುವೆಯೇ ಅಪರಿಚಿತ ವ್ಯಕ್ತಿಯೋರ್ವ ಇಬ್ಬರ ಜಗಳವನ್ನು ಲಾಭ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೀಟೂ ಆರೋಪ ಎದುರಿಸುತ್ತಿರುವ ನಟ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ್ದು, ಶೃತಿ ಹರಿಹರನ್ ರೊಂದಿಗೆ ತಾನು ಸಂಧಾನ ಮಾಡಿಸುತ್ತೇನೆ. ತನಗೆ 1.5 ಕೋಟಿ ರೂ ನೀಡಿ ಎಂದು ಬೇಡಿಕೆ ಇಟ್ಟಿದ್ದನಂತೆ. ಈ ಬಗ್ಗೆ ಸ್ವತಃ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ, 'ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಿದ್ದಾರೆ.
ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೆ, ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದಾನೆ ಎಂದು ಶಿವಾರ್ಜುನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT