ಅರ್ಜುನ್ ಸರ್ಜಾ - ಶ್ರುತಿ ಹರಿಹರನ್ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ಮಾನಹಾನಿ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟಿಸ್

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರುತಿ....

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರುತಿ ಹರಿಹರನ್ ಅವರಿಗೆ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಶ್ರುತಿ ವಿರುದ್ಧ ಅರ್ಜುನ್ ಸರ್ಜಾ ಅವರು 5 ಕೋಟಿ ರುಪಾಯಿ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಪ್ರತಿಕ್ರಿಯೆ ಸಲ್ಲಿಸುವಂತೆ ನಟಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.
ನಿನ್ನೆ ಶ್ರುತಿ ಹರಿಹನ್ ವಿರುದ್ಧ ಸಿವಿಲ್‌ ಕೋರ್ಟ್‌ನಲ್ಲಿ ಧ್ರುವ ಸರ್ಜಾ ಮೂಲಕ ಮಾನನಷ್ಟ ಮೊಕದ್ದಮೆ ದಾಖಲು ಮಾಡಿಸಿದ್ದ ಅರ್ಜುನ್ ಸರ್ಜಾ, 5 ಕೋಟಿ ರುಪಾಯಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಅಲ್ಲದೆ ಈ ಪ್ರಕರಣ ಕುರಿತಂತೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಶ್ರುತಿ ಹರಿಹರನ್ ಗೆ ನಿರ್ಬಂಧ ಹೇರಬೇಕೆಂದು ಅರ್ಜುನ್ ಸರ್ಜಾ ಅವರು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT