ನಟ ಅರ್ಜುನ್ ಸರ್ಜಾ ಮತ್ತು ನಟಿ ಶ್ರುತಿ ಹರಿಹರನ್ 
ಸಿನಿಮಾ ಸುದ್ದಿ

ಶ್ರುತಿ ಹರಿಹರನ್ ದೂರು ಬಳಿಕ ಅರ್ಜುನ್ ಸರ್ಜಾ ವಿರುದ್ಧ ಎಫ್ಐಆರ್ ದಾಖಲು

ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವ ಬಹುಭಾಷಆ ನಟ ಅರ್ಜುನ್ ಸರ್ಜಾ ಮತ್ತು ನಟಿ ಶ್ರುತಿ ಹರಿಹರನ್ ನಡುವಿನ ಮೀ ಟೂ ವಿವಾದ ಮಹತ್ವದ ತಿರುವು ಪಡೆದುಕೊಂಡಿದೆ...

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಮತ್ತು ನಟಿ ಶ್ರುತಿ ಹರಿಹರನ್ ನಡುವಿನ ಮೀ ಟೂ ವಿವಾದ ಮಹತ್ವದ ತಿರುವು ಪಡೆದುಕೊಂಡಿದೆ. 
ಶ್ರುತಿ ಹರಿಹರನ್ ಅವರು ದೂರು ದಾಖಲಿಸಿದ ಬಳಿಕ ನಟ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಸೆಕ್ಷನ್ 354 (ಮಹಿಳೆಯ ವಿರುದ್ಧ ಕ್ರಿಮಿನಲ್ ಗಳ ಬಳಕೆ) 354 (ಎ) (ಲೈಂಗಿಕ ಕಿರುಕುಳ, 506 (ಕ್ರಿಮಿನಲ್ ಉದ್ದೇಶ), 509 (ಮಹಿಳೆಗೆ ಅವಮಾನ) ಅಡಿಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 
ವಿವಾದ ಬಗೆಹರಿಸುವಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ವಿಫಲಗೊಂಡ ಬಳಿಕ ಅರ್ಜುನ್ ಸರ್ಜಾ ಅವರು ಶ್ರುತಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಾದ ಬಳಿಕ ಕಾನೂನು ಸಲಹೆ ಪಡೆದ ನಟಿ ಶ್ರುತಿ ಹರಿಹರನ್ ಅವರು ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. 
ಶನಿವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ವಕೀಲರೊಂದಿಗೆ ಕಸ್ತೂರ್ ರಸ್ತೆಯ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿದ ಶ್ರುತಿಯವರು 2016ರಲ್ಲಿ ತೆರೆ ಕಂಡ ವಿಸ್ಮಯ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ತಮಗೆ ಆ ಚಿತ್ರದ ನಾಯಕ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು 5 ಪುಟಗಳ ದೂರು ಸಲ್ಲಿಸಿದ್ದರು. 
ಶ್ರುತಿ ಸಲ್ಲಿಸಿದ ದೂರಿನನ್ವಯ ಅರ್ಜುನ್ ಸರ್ಜಾ ವಿರುದ್ಧ ಎಫ್ಐಆರ್ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಬಹುಭಾಷಾ ನಟನಿಗೆ ಬಂಧನ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT