ಶೃತಿ ಹರಿಹರನ್-ಅರ್ಜುನ್ ಸರ್ಜಾ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ವಿರುದ್ಧ MeToo: ಪೊಲೀಸರ ಮುಂದೆ ಶೃತಿ ಆಪ್ತ ಸಹಾಯಕ ಕಿರಣ್, ಮೋನಿಕಾ ಹೇಳಿಕೆ!

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ...

ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. 
ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹಾಗೂ ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್ ಹೇಳಿಕೆಯನ್ನು ಪೊಲೀಸರು ರಹಸ್ಯ ಸ್ಥಳದಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ಹಾಗೂ ಪಿಎಸ್ಐ ರೇಣುಕಾ ಸಮ್ಮುಖದಲ್ಲಿ ಸಾಕ್ಷಿಗಳ ಈ ಹೇಳಿಕೆ ದಾಖಲು ಮಾಡಿದ್ದಾರೆ. 
ಕಿರಣ್ ಹೇಳಿದ್ದು ಏನು?
ಅರ್ಜುನ್ ಸರ್ಜಾ ಅವರಿಂದ ಶೃತಿ ಹರಿಹರನ್ ಗೆ ಕಿರುಕುಳ ಆಗಿದ್ದು ನಿಜ. ರಿಹರ್ಸಲ್ ವೇಳೆಯೂ ಶೃತಿ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದರು. ನಾವು ದೇವನಹಳ್ಳಿಯಿಂದ ಹೊರಟಾಗ ಸಿಗ್ನಲ್ ಬಳಿ ಅರ್ಜುನ್ ಸರ್ಜಾ ಅವರು ಉಟಕ್ಕೆ ಕರೆದಿದ್ದು ನಿಜ. ಅಷ್ಟೇ ಅಲ್ಲದೆ ರೆಸಾರ್ಟ್ ಗೆ ಹೋಗೋಣ ಬಾ ಎಂದು ಕರೆದಿದ್ದರು. ಈ ಸಂದರ್ಭದಲ್ಲಿ ನಾನು ಅಲ್ಲೇ ಇದ್ದೆ ಎಂದು ಕಿರಣ್ ಹೇಳಿದ್ದಾರೆ. 
ಮೋನಿಕಾ ಹೇಳಿದ್ದು ಏನು?
ಎರಡು ವರ್ಷಗಳ ಹಿಂದಿನ ಘಟನೆ ನನಗೆ ಏನು ಗೊತ್ತಿಲ್ಲ. ನನಗೆ ಏನೂ ನೆನಪಾಗುತ್ತಿಲ್ಲ. ವಿಸ್ಮಯ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಏನಾಯ್ತು ಅನ್ನೋದು ನನಗೆ ಸರಿಯಾಗಿ ಗೊತ್ತಿಲ್ಲ. ಲೈಂಗಿಕ ಕಿರುಕುಳ ಬಗ್ಗೆ ನನಗೇನೂ ಗೊತ್ತಿಲ್ಲ, ಶೃತಿಯೂ ಈ ಬಗ್ಗೆ ನನ್ನಲ್ಲಿ ಏನು ಹೇಳಿಕೊಂಡಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. 
ಇನ್ನು ವಿಸ್ಮಯ ಚಿತ್ರದ ಸಹ ನಿರ್ದೇಶಕ ಭರತ್ ನೀಲಕಂಠ ಹಾಗೂ ಶೃತಿ ಹರಿಹರನ್ ಆಪ್ತ ಸಹಾಯಕ ಬೋರೇಗೌಡ ಅವರು ಬುಧವಾರ ಪೊಲೀಸರ ಮುಂದೆ ಹೇಳಿಕೆ ನೀಡುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT