ಶೃತಿ ಹರಿಹರನ್-ಅರ್ಜುನ್ ಸರ್ಜಾ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ವಿರುದ್ಧ MeToo: ಪೊಲೀಸರ ಮುಂದೆ ಶೃತಿ ಆಪ್ತ ಸಹಾಯಕ ಕಿರಣ್, ಮೋನಿಕಾ ಹೇಳಿಕೆ!

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ...

ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. 
ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹಾಗೂ ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್ ಹೇಳಿಕೆಯನ್ನು ಪೊಲೀಸರು ರಹಸ್ಯ ಸ್ಥಳದಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ಹಾಗೂ ಪಿಎಸ್ಐ ರೇಣುಕಾ ಸಮ್ಮುಖದಲ್ಲಿ ಸಾಕ್ಷಿಗಳ ಈ ಹೇಳಿಕೆ ದಾಖಲು ಮಾಡಿದ್ದಾರೆ. 
ಕಿರಣ್ ಹೇಳಿದ್ದು ಏನು?
ಅರ್ಜುನ್ ಸರ್ಜಾ ಅವರಿಂದ ಶೃತಿ ಹರಿಹರನ್ ಗೆ ಕಿರುಕುಳ ಆಗಿದ್ದು ನಿಜ. ರಿಹರ್ಸಲ್ ವೇಳೆಯೂ ಶೃತಿ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದರು. ನಾವು ದೇವನಹಳ್ಳಿಯಿಂದ ಹೊರಟಾಗ ಸಿಗ್ನಲ್ ಬಳಿ ಅರ್ಜುನ್ ಸರ್ಜಾ ಅವರು ಉಟಕ್ಕೆ ಕರೆದಿದ್ದು ನಿಜ. ಅಷ್ಟೇ ಅಲ್ಲದೆ ರೆಸಾರ್ಟ್ ಗೆ ಹೋಗೋಣ ಬಾ ಎಂದು ಕರೆದಿದ್ದರು. ಈ ಸಂದರ್ಭದಲ್ಲಿ ನಾನು ಅಲ್ಲೇ ಇದ್ದೆ ಎಂದು ಕಿರಣ್ ಹೇಳಿದ್ದಾರೆ. 
ಮೋನಿಕಾ ಹೇಳಿದ್ದು ಏನು?
ಎರಡು ವರ್ಷಗಳ ಹಿಂದಿನ ಘಟನೆ ನನಗೆ ಏನು ಗೊತ್ತಿಲ್ಲ. ನನಗೆ ಏನೂ ನೆನಪಾಗುತ್ತಿಲ್ಲ. ವಿಸ್ಮಯ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಏನಾಯ್ತು ಅನ್ನೋದು ನನಗೆ ಸರಿಯಾಗಿ ಗೊತ್ತಿಲ್ಲ. ಲೈಂಗಿಕ ಕಿರುಕುಳ ಬಗ್ಗೆ ನನಗೇನೂ ಗೊತ್ತಿಲ್ಲ, ಶೃತಿಯೂ ಈ ಬಗ್ಗೆ ನನ್ನಲ್ಲಿ ಏನು ಹೇಳಿಕೊಂಡಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. 
ಇನ್ನು ವಿಸ್ಮಯ ಚಿತ್ರದ ಸಹ ನಿರ್ದೇಶಕ ಭರತ್ ನೀಲಕಂಠ ಹಾಗೂ ಶೃತಿ ಹರಿಹರನ್ ಆಪ್ತ ಸಹಾಯಕ ಬೋರೇಗೌಡ ಅವರು ಬುಧವಾರ ಪೊಲೀಸರ ಮುಂದೆ ಹೇಳಿಕೆ ನೀಡುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT