ಪೊಲೀಸ್ ಆಯುಕ್ತರು ಮತ್ತು ಪ್ರತಿಭಟನೆ ಚಿತ್ರ 
ಸಿನಿಮಾ ಸುದ್ದಿ

'ವೀರ ಮಹಾದೇವಿ' ಚಿತ್ರದಲ್ಲಿ ಸನ್ನಿ ನಟನೆಗೆ ವಿರೋಧ: ಕಾನೂನು ಕೈಗೆತ್ತಿಕೊಂಡರೆ ಕ್ರಮ- ಸುನೀಲ್ ಕುಮಾರ್

ವೀರ ಮಹಾದೇವಿ ಪಾತ್ರದಲ್ಲಿ ನೀಲಿ ಚಿತ್ರದ ತಾರೆ ಸನ್ನಿ ಲಿಯೋನ್ ನಟಿಸುತ್ತಿರುವುದಕ್ಕೆ ಕನ್ನಡ ಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದ್ದು, ಒಂದು ವೇಳೆ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ಹೆಮ್ಮೆಯ ಪುತ್ರಿ ವೀರ ವನಿತೆ ಮಹಾದೇವಿ  ಕುರಿತು ನಿರ್ಮಾಣವಾಗುತ್ತಿರುವ ಚಲನಚಿತ್ರದಲ್ಲಿ ನೀಲಿ ಚಿತ್ರದ ತಾರೆ ಸನ್ನಿ ಲಿಯೋನ್  ವೀರ ಮಹಾದೇವಿ ಪಾತ್ರದಲ್ಲಿ ನಟಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ರಾಷ್ಟ್ರಕೂಟ ಅಮೋಘ ವರ್ಷ ನೃಪತುಂಗ ಅವರ ಕಥೆ ಆಧರಿಸಿ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ 5 ಭಾಷೆಗಳಲ್ಲಿ ವಿ.ಸಿ.ವಾಡಿ ಉದಯನ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಇತಿಹಾಸವನ್ನು ತಿರುಚ ಲಾಗಿದ್ದು, ಮೂರನೆ ಗೋವಿಂದಂ ಅವರನ್ನು ಗುಲಾಮರು ಎಂಬಂತೆ ಚಿತ್ರಿಸಲಾಗುತ್ತಿದೆ.

ಬಹಳಷ್ಟು ವಿಷಯಗಳನ್ನು ತಿರುಚಿ ಇತಿಹಾಸಕ್ಕೆ ಅಪಚಾರ ಮಾಡಿರುವುದಲ್ಲದೆ ಕನ್ನಡಿಗರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲಾಗುತ್ತಿದೆ ಚಿತ್ರದ ಪಾತ್ರಧಾರಿಯನ್ನು ಬದಲಾವಣೆ ಮಾಡದೆ ಇದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ವಿವಿಧ ಕನ್ನಡ ಪರ ಸಂಘಟನೆಗಳು ಹೇಳಿವೆ.

ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಇಂತಹ ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ.  ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರುವುದಿಲ್ಲ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT