ಶೃತಿ ಹರಿಹರನ್-ಅರ್ಜುನ್ ಸರ್ಜಾ-ಚೇತನ್ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ವಿರುದ್ಧ ಶೃತಿ MeToo ಆರೋಪ; ವಿಸ್ಮಯ ಚಿತ್ರ ನಿರ್ಮಾಪಕನಿಂದ ಹೊಸ ಬಾಂಬ್!

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ಮಯ ಚಿತ್ರ ನಿರ್ಮಾಪಕ ಉದಯ್ ಕುಮಾರ್...

ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ಮಯ ಚಿತ್ರ ನಿರ್ಮಾಪಕ ಉದಯ್ ಕುಮಾರ್ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು ಅರ್ಜುನ್ ಸರ್ಜಾ ವಿರುದ್ಧ ಶೃತಿ ಮಾಡಿರುವ ಆರೋಪಗಳನ್ನು ಅಲ್ಲಗಳೆದಿದ್ದಾರೆ. 
ಉದಯ್ ಕುಮಾರ್ ಅವರು ಶೃತಿ ಶೂಟಿಂಗ್ ಸೆಟ್ ಗೆ ಬಂದದ್ದು ಕೇವಲ 9 ದಿನ ಮಾತ್ರ. ಶೃತಿಗೆ 3 ಲಕ್ಷ ರುಪಾಯಿ ಸಂಭಾವನೆ ನೀಡಲಾಗಿತ್ತು. ಶೃತಿ ಆರೋಪಿಸಿದ ಹಾಗೆ ಯಾವುದೇ ಘಟನೆ ಶೂಟಿಂಗ್ ಸೆಟ್ ನಲ್ಲಿ ನಡೆದಿಲ್ಲ. ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಸುಮಾರು 40 ಜನ ಇರುತ್ತಾರೆ. ಆ ರೀತಿ ನಡೆಯಲು ಸಾಧ್ಯವಿಲ್ಲ ಎಂದರು ಹೇಳಿದರು. 
ಶೃತಿ ಸಾಮಾಜಿಕ ಜಾಲತಾಣದಲ್ಲಿ ಏನೋ ಹೇಳಲು ಹೋಗಿ ಅದಕ್ಕೆ ಈಗ ಸ್ಟಿಕ್ ಆಗಿದ್ದಾರೆ. ವೈಯಕ್ತಿಕ ಪ್ರತಿಷ್ಟೆಗೆ ಬಿದ್ದು ಆರೋಪ ಮಾಡಿದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ. 
ವಿಸ್ಮಯ ಚಿತ್ರದ ವಿಲನ್ ರೋಲ್ ಗೆ ಮೊದಲು ಚೇತನ್ ರನ್ನು ಆಯ್ಕೆ ಮಾಡಲಾಗಿತ್ತು. ನಂತರ ಜೆಕೆ ಸಾಕಷ್ಟು ಪಾಪುಲರ್ ಆಗಿದ್ದು ಚೇತನ್ ಕೈಬಿಡಲಾಗಿತ್ತು. ಇನ್ನು ಪ್ರೇಮಬರಹ ಚಿತ್ರಕ್ಕೂ ಚೇತನ್ ಹೆಸರು ಕೈಬಿಟ್ಟಿರುವುದರಿಂದ ಚೇತನ್ ಶೃತಿಗೆ ಸಪೋರ್ಟ್ ಮಾಡಿದ್ದಾರೆ ಎಂದು ಉದಯ್ ಕುಮಾರ್ ಪೊಲೀಸರ ಮುಂದೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT