ಟಾಲಿವುಡ್ ಮೆಗಾಸ್ಟಾರ್ ಚಿರಂಚೀವಿ ಅಭಿನಯದ ಬಹುನಿರೀಕ್ಷಿತ ಸೈರಾ ನರಸಿಂಹರೆಡ್ಡಿ ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದು ಸುದೀಪ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚಿತ್ರ ತಂಡ ಕಿಚ್ಚನ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದಲ್ಲಿ ಅವುಕು ರಾಜ್ಯದ ರಾಜನಾಗಿ ನಟಿಸುತ್ತಿದ್ದಾರೆ. ಇದೀಗ ಅವರ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಸುದೀಪ್ ಕಪ್ಪು ಬಣ್ಣದ ಉಡುಪಿನಲ್ಲಿ ಕಂಗೊಳಿಸಿದ್ದಾರೆ.
ಇತಿಹಾಸಕಾರರ ಪ್ರಕಾರ, 1846 ಜುಲೈ 23ರಂದು ಬ್ರಿಟಿಷರ ವಿರುದ್ಧ ನಡೆದ ಗಿಡ್ಡಲುರು ಬಂಡಾಯದಲ್ಲಿ ಉಯ್ಯಾಲುವಾಡ ನರಸಿಂಹರೆಡ್ಡಿ ಜತೆ ಅವುಕು ರಾಜ ಕೈ ಜೋಡಿಸುತ್ತಾನೆ. ಈ ಕದನದಲ್ಲಿ ಸೆರೆಯಾದ ಉಯ್ಯಾಲು ನರಸಿಂಹರೆಡ್ಡಿಯನ್ನು 1846ರ ಅಕ್ಟೋಬರ್ 6ರಂದು ಮರಣದಂಡನೆಗೊಳಪಡಿಸುತ್ತಾರೆ. ಇದೇ ಕಥಾವಸ್ತುವನ್ನಿಟ್ಟುಕೊಂಡು ನಿರ್ದೇಶಕ ಸುರೇಂದರ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕಿಚ್ಚ ಸುದೀಪ್ ಹುಟ್ಟುಹಬ್ಬದ ನಿಮಿತ್ತ ಚಿತ್ರತಂಡ ಸುದೀಪ್ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.