ವಿಜಯಲಕ್ಷ್ಮೀ-ದರ್ಶನ್ 
ಸಿನಿಮಾ ಸುದ್ದಿ

ದರ್ಶನ್ ಅಭಿನಯದ 'ಯಜಮಾನ' ಸೆಟ್‌ಗೆ ದಿಢೀರ್ ಭೇಟಿ ಕೊಟ್ಟ ಅದೃಷ್ಟ ದೇವತೆ ಯಾರು ಗೊತ್ತ!

ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಯಜಮಾನ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಈ ಮಧ್ಯೆ ಸೆಟ್ ಗೆ ಅದೃಷ್ಟ ದೇವತೆಯೊಬ್ಬರ ಆಗಮನವಾಗಿದೆ...

ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಯಜಮಾನ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಈ ಮಧ್ಯೆ ಸೆಟ್ ಗೆ ಅದೃಷ್ಟ ದೇವತೆಯೊಬ್ಬರ ಆಗಮನವಾಗಿದೆ. 
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು ಈ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದಿಢೀರ್ ಭೇಟಿ ಕೊಟ್ಟು ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದರು. ಕೆಲ ಹೊತ್ತು ದರ್ಶನ್ ಜೊತೆ ಮಾತುಕತೆ ನಡೆಸಿದ ವಿಜಯಲಕ್ಷ್ಮಿ ಬಳಿಕ ಅಲ್ಲಿಂದ ತೆರಳಿದ್ದಾರೆ. 
ಕೆಲ ವರ್ಷಗಳ ಗ್ಯಾಪ್ ಬಳಿಕ ದರ್ಶನ್ ಚಿತ್ರದ ಶೂಟಿಂಗ್ ಸೆಟ್ ಗೆ ವಿಜಯಲಕ್ಷ್ಮೀ ಭೇಟಿ ನೀಡಿದ್ದು ಇಬ್ಬರೂ ಪರಸ್ಪರ ಮಾಡನಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಯಜಮಾನ ಚಿತ್ರವನ್ನು ಖ್ಯಾತ ನಿರ್ದೇಶಕ ಬಿ ಸುರೇಶ್ ನಿರ್ಮಾಣದ ಮಾಡುತ್ತಿದ್ದು ಪಿ ಕುಮಾರ್ ನಿರ್ದೇಶನ ಮಾಡುತ್ತಿದ್ದು ಕಿರಿಕ್ ಪಾರ್ಟಿ ಬೆಡಕಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT