ಗಣೇಶ್, ಪ್ರೀತಂ ಗುಬ್ಬಿ 
ಸಿನಿಮಾ ಸುದ್ದಿ

ಮತ್ತೆ ತೆರೆ ಮೇಲೆ ಗೋಲ್ಡನ್ ಸ್ಟಾರ್ ಗಣೇಶ್, ಪ್ರೀತಂ ಗುಬ್ಬಿ ಜೋಡಿ ಮ್ಯಾಜಿಕ್!

ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪ್ರೀತಂ ಗುಬ್ಬಿ ಜೋಡಿ ಮತ್ತೆ ತೆರೆ ಮೇಲೆ ಮ್ಯಾಜಿಕ್ ಮಾಡಲು ರೆಡಿಯಾಗುತ್ತಿದೆ...

ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪ್ರೀತಂ ಗುಬ್ಬಿ ಜೋಡಿ ಮತ್ತೆ ತೆರೆ ಮೇಲೆ ಮ್ಯಾಜಿಕ್ ಮಾಡಲು ರೆಡಿಯಾಗುತ್ತಿದೆ. 
ಹೌದು, ಈ ಸೂಪರ್ ಹಿಟ್ ಜೋಡಿ ಇದೀಗ ಮರೆಯುವ ಮುನ್ನ ಚಿತ್ರದ ಮೂಲಕ ಮತ್ತೆ ಒಂದಾಗುತ್ತಿದೆ. ಗಣೇಶ್ ಚತುರ್ಥಿ ಹಬ್ಬದ ದಿನ ಚಿತ್ರದ ಕುರಿತು ಅಧಿಕೃತ ಘೋಷಣೆ ಹೊರಬಿದ್ದಿದೆ. 
ಚಿತ್ರದ ಕುರಿತಂತೆ ಮಾತನಾಡಿರುವ ಪ್ರೀತಂ ಗುಬ್ಬಿ, ಮರೆಯುವ ಮುನ್ನ ಚಿತ್ರದ ಚಿತ್ರಕಥೆ ಕುರಿತಂತೆ ಹಲವು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದೆ. ಇದು ಸಂಪೂರ್ಣ ರೊಮ್ಯಾಂಟಿಕ್ ಚಿತ್ರಕಥೆ ಹೊಂದಿದೆ. ಈ ಚಿತ್ರದಲ್ಲಿನ ನಾಯಕನ ಪಾತ್ರ ಗಣೇಶ್ ಅವರಿಗೆ ಹೇಳಿ ಮಾಡಿಸಿದಂತಿದೆ ಎಂದು ಹೇಳಿದ್ದಾರೆ. 
ಗಣೇಶ್ ಅವರು ಸದ್ಯ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದು ಈ ಚಿತ್ರಗಳ ಚಿತ್ರೀಕರಣ ಮುಗಿದ ನಂತರ ಮರೆಯುವ ಮುನ್ನ ಚಿತ್ರದ ಕೆಲಸ ಶುರುವಾಗಲಿದೆ ಎಂದರು.
ಸದ್ಯ ಗಣೇಶ್ ಪ್ರಶಾಂತ್ ರಾಜ್ ನಿರ್ದೇಶನದ ಆರೆಂಜ್, ನಾಗಣ್ಣ ನಿರ್ದೇಶನದ ಗಿಮಿಕ್, ನಂತರ ವಿಜಯ್ ನಾಗೇಂದ್ರ ಪಾದಾರ್ಪಣೆ ಗೀತಾ ಚಿತ್ರದ ನಂತರ ಈ ಚಿತ್ರವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT