ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

ಜೀವನದ ಅನುಭವಗಳೇ 'ಇರುವುದೆಲ್ಲವ ಬಿಟ್ಟು'; ನಿರ್ದೇಶಕ ಕಾಂತ ಕನ್ನಳ್ಳಿ

ಜಲ್ಸ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ ಕಾಂತ ಕನ್ನಳ್ಳಿಇದೀಗ 'ಇರುವುದೆಲ್ಲವ ...

ಜಲ್ಸ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ ಕಾಂತ ಕನ್ನಳ್ಳಿ ಇದೀಗ ಇರುವುದೆಲ್ಲವ ಬಿಟ್ಟು ಎಂಬ ಎರಡನೇ ಚಿತ್ರ ತಯಾರಿಸಿದ್ದು ಇದೇ ತಿಂಗಳ 21ರಂದು ಬಿಡುಗಡೆಗೆ ಕಾಯುತ್ತಿದ್ದಾರೆ. ಜೀವನದ ಅನುಭವಗಳನ್ನು ತೆರೆ ಮೇಲೆ ತರಲಾಗಿದೆ ಎನ್ನುತ್ತಾರೆ ನಿರ್ದೇಶಕ ಕಾಂತ.

ಕವಿ ಗೋಪಾಲಕೃಷ್ಣ ಅಡಿಗರ ಕವನ ಇರುವುದೆಲ್ಲವ ಬಿಟ್ಟು, ಇರದುದರೆಡೆಗೆ ತುಡಿಯುವುದೇ ಜೀವನ ಎಂಬ ಸಾಲುಗಳನ್ನು ತೆಗೆದುಕೊಂಡು ಚಿತ್ರದ ಶೀರ್ಷಿಕೆ ಇಟ್ಟಿದ್ದಾರೆ. ಚಿತ್ರದಲ್ಲಿ ಒಂದು ಟ್ವಿಸ್ಟ್ ನೀಡಿರುವ ಅವರು, ಇಂದಿನ ಪ್ರೇಕ್ಷಕರಿಗೆ ಹತ್ತಿರವಾಗುವ ರೀತಿಯಲ್ಲಿ ಸಿನಿಮಾ ಮಾಡಿದ್ದು ಕೌಟುಂಬಿಕ ಪ್ರಧಾನ ಚಿತ್ರವಾಗಿದೆ ಎನ್ನುತ್ತಾರೆ.

ಮೇಘನಾ ರಾಜ್, ತಿಲಕ್ ಮತ್ತು ಶ್ರೀ ಮಹದೇವ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ವಿಲನ್ ಪಾತ್ರ ಇಲ್ಲವಂತೆ. ಜೀವನದಲ್ಲಿ ನಮ್ಮಲ್ಲಿ ಒಳ್ಳೆ ಗುಣಗಳೂ ಇರುತ್ತವೆ, ಅದೇ ರೀತಿ ಕೆಟ್ಟ ಗುಣಗಳು ಕೂಡ ಇರುತ್ತವೆ, ಅದನ್ನೇ ಚಿತ್ರದ ಪಾತ್ರಗಳಲ್ಲಿ ತಂದಿದ್ದೇನೆ, ಇಲ್ಲಿ ಪ್ರತಿ ಪಾತ್ರಗಳು ಕೂಡ ಒಳ್ಳೆಯ ಮತ್ತು ಕೆಟ್ಟ ಮುಖಗಳನ್ನು ಹೊಂದಿವೆ ಎನ್ನುತ್ತಾರೆ.

ತಮಿಳು ನಟ-ನಿರ್ದೇಶಕ ಸಿಲಂಬರಸನ್ ಈ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇರುವುದೆಲ್ಲವ ಬಿಟ್ಟು ಚಿತ್ರಕ್ಕೆ ಶ್ರೀಧರ್ ವಿ ಸಂಗೀತ, ವಿಲನ್ ಡೇವಿಡ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT