ಮನೋರಂಜನ್ 
ಸಿನಿಮಾ ಸುದ್ದಿ

ನವ ನಿರ್ದೇಶಕನ ಕನಸಿಗೆ ಸಾಥ್ ನೀಡಿದ ಕ್ರೇಜಿಸ್ಟಾರ್ ಪುತ್ರ ಮನೋರಂಜನ್

ನವ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸುವ ಮೂಲಕ ನಿರ್ದೇಶಕರ ಕನಸು ಸಾಕಾರಗೊಳ್ಳಲು ಸಹಕರಿಸುತ್ತಿರುವ ಮನೋರಂಜನ್ ರವಿಚಂದ್ರನ್ ಇದೀಗ ಮತ್ತೊಬ್ಬ ನವ ನಿರ್ದೇಶಕನ...

ನವ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸುವ ಮೂಲಕ ನಿರ್ದೇಶಕರ ಕನಸು ಸಾಕಾರಗೊಳ್ಳಲು ಸಹಕರಿಸುತ್ತಿರುವ ಮನೋರಂಜನ್ ರವಿಚಂದ್ರನ್ ಇದೀಗ ಮತ್ತೊಬ್ಬ ನವ ನಿರ್ದೇಶಕನ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ. 
ನವ ನಿರ್ದೇಶಕ ಮನು ಎಂಬುವರು ಮುಂದಿನ ನಿಲ್ದಾಣ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು ಈ ಚಿತ್ರದಲ್ಲಿ ಮನೋರಂಜನ್ ನಾಯಕನಾಗಿ ನಟಿಸುತ್ತಿದ್ದಾರೆ. ಮನು ಸ್ವತಂತ್ರ ನಿರ್ದೇಶಕರಾಗುವ ಮೊದಲು ಸಂಭಾಷಣೆ, ಕಥೆ ಮತ್ತು ಚಿತ್ರಕಥೆ ಬರೆಯುತ್ತಿದ್ದರು. 
ಮನೋರಂಜನ್ ಸದ್ಯ ನವ ನಿರ್ದೇಶಕರ ಚಿಲ್ಲುಂ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ಮುಂದಿನ ನಿಲ್ದಾಣ ಚಿತ್ರಕ್ಕೂ ಸಹಿ ಮಾಡಿದ್ದಾರೆ. 
ಮುಂದಿನ ನಿಲ್ದಾಣ ಚಿತ್ರವನ್ನು ಮನು ಸಹೋದರ ಜಗದೀಶ್ ಎಂಬುವರು ನಿರ್ಮಾಣ ಮಾಡುತ್ತಿದ್ದಾರೆ. ಮೈಸೂರು, ಬಳ್ಳಾರಿ ಚಿಕ್ಕಮಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಅಕ್ಟೋಬರ್ ನಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT