ಐತಿಹಾಸಿಕ ಕತೆಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ ಸಹಿ ಮಾಡಿದ್ದು, ಶೀಘ್ರದಲ್ಲಿಯೇ ದರ್ಶನ್ ಅವರು ವೀರಮದಕರಿ ನಾಯಕರಾಗಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ.
ದರ್ಶನ್ ಅವರಿಗಾಗಿಯೇ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು, ಕಾದಂಬರಿ ಆಧಾರಿಕ ಅಪೂರ್ವ ಐತಿಹಾಸಿಕ ಚಿತ್ರ ನಿರ್ಮಾಣ ಸಾಹಸಕ್ಕೆ ಕೈ ಹಾಕಿದ್ದು, ಚಿತ್ರಕ್ಕೆ ದರ್ಶನ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಹಿಂದೆ ಸಂಗೊಳ್ಳಿ ರಾಯಣ್ಣನಾಗಿ ತೆರೆಯ ಮೇಲೆ ಗರ್ಜಿಸಿದ್ದ ದರ್ಶನ್ ಅವರು, ಇದೀಗ ಕುರುಕ್ಷೇತ್ರದಲ್ಲಿ ದುರ್ಯೋಧನ ಪಾತ್ರದಲ್ಲಿ ಮಿಂಚಿದ್ದಾರೆ. ಕುರುಕ್ಷೇತ್ರ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದ್ದು, ಈ ನಡುವಲ್ಲೇ ದರ್ಶನ್ ಅವರು ಕೋಟೆ ನಾಡಿನ ಮದಕರಿ ನಾಯಕನಾಗಿ ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos