ದುನಿಯಾ ವಿಜಿ ಚಿತ್ರ 
ಸಿನಿಮಾ ಸುದ್ದಿ

ನಟ ದುನಿಯಾ ವಿಜಿಗೆ 14 ದಿನಗಳ ನ್ಯಾಯಾಂಗ ಬಂಧನ :8ನೇ ಎಸಿಎಂಎಂ ಕೋರ್ಟ್ ಆದೇಶ!

ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು:ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು  14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಖ್ಯಾತ ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ  ಅವರನ್ನು ಅಪಹರಿಸಿ, ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ದುನಿಯಾ ವಿಜಿ ಹಾಗೂ ಆತನ ಗ್ಯಾಂಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ 8 ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಇಂದು ರಾತ್ರಿ ಈ ಪ್ರಕರಣದ ವಿಚಾರಣೆ ನಡೆಸಿದ  8 ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶರು ಈ ತೀರ್ಪು ಪ್ರಕಟಿಸಿದ್ದಾರೆ. 
ನಂತರ  ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿರುವ ಕಾರಾಗೃಹಕ್ಕೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಬಳಿಕ ಆಸ್ಪತ್ರೆ ಜೈಲಿನಲ್ಲಿ ವೈದ್ಯಕೀಯ ತಪಾಸಣೆ ನಡೆಸಿ  ವಿಶೇಷ ಭದ್ರತಾ ವ್ಯವಸ್ಥೆ ಹೊಂದಿರುವ ಕೊಠಡಿಯನ್ನು ವಿಜಿಗೆ ನೀಡಲಾಯಿತು. ಆತನ ಸಹಚರರಿಗೆ ಪ್ರತ್ಯೇಕ ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ.
ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾನಿ ಪೂರಿ ಕಿಟ್ಟಿ , ದುನಿಯಾ ವಿಜಿ ಹಾಗೂ ಆತನ ಸಹಚರರು ನಡೆಸಿದ ಹಲ್ಲೆಯಿಂದ ಮಾರುತಿ ಗೌಡ  ಕಣ್ಣು , ಮೂಗು, ಕಿವಿಯ ಸಮಸ್ಯೆ ಉಂಟಾಗಿದ್ದು, ಸಿಟಿ ಸ್ಕ್ಯಾನಿಂಗ್ ವರದಿ ಇನ್ನೂ ತಿಳಿದುಬಂದಿಲ್ಲ. ನಾಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ವಿಶೇಷ ಅಭಿಯೋಜಕರನ್ನು ನೇಮಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT