ದುನಿಯಾ ವಿಜಿ ಚಿತ್ರ 
ಸಿನಿಮಾ ಸುದ್ದಿ

ನಟ ದುನಿಯಾ ವಿಜಿಗೆ 14 ದಿನಗಳ ನ್ಯಾಯಾಂಗ ಬಂಧನ :8ನೇ ಎಸಿಎಂಎಂ ಕೋರ್ಟ್ ಆದೇಶ!

ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು:ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಿಯನ್ನು  14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಖ್ಯಾತ ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ  ಅವರನ್ನು ಅಪಹರಿಸಿ, ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ದುನಿಯಾ ವಿಜಿ ಹಾಗೂ ಆತನ ಗ್ಯಾಂಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ 8 ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಇಂದು ರಾತ್ರಿ ಈ ಪ್ರಕರಣದ ವಿಚಾರಣೆ ನಡೆಸಿದ  8 ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶರು ಈ ತೀರ್ಪು ಪ್ರಕಟಿಸಿದ್ದಾರೆ. 
ನಂತರ  ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿರುವ ಕಾರಾಗೃಹಕ್ಕೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಬಳಿಕ ಆಸ್ಪತ್ರೆ ಜೈಲಿನಲ್ಲಿ ವೈದ್ಯಕೀಯ ತಪಾಸಣೆ ನಡೆಸಿ  ವಿಶೇಷ ಭದ್ರತಾ ವ್ಯವಸ್ಥೆ ಹೊಂದಿರುವ ಕೊಠಡಿಯನ್ನು ವಿಜಿಗೆ ನೀಡಲಾಯಿತು. ಆತನ ಸಹಚರರಿಗೆ ಪ್ರತ್ಯೇಕ ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ.
ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾನಿ ಪೂರಿ ಕಿಟ್ಟಿ , ದುನಿಯಾ ವಿಜಿ ಹಾಗೂ ಆತನ ಸಹಚರರು ನಡೆಸಿದ ಹಲ್ಲೆಯಿಂದ ಮಾರುತಿ ಗೌಡ  ಕಣ್ಣು , ಮೂಗು, ಕಿವಿಯ ಸಮಸ್ಯೆ ಉಂಟಾಗಿದ್ದು, ಸಿಟಿ ಸ್ಕ್ಯಾನಿಂಗ್ ವರದಿ ಇನ್ನೂ ತಿಳಿದುಬಂದಿಲ್ಲ. ನಾಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ವಿಶೇಷ ಅಭಿಯೋಜಕರನ್ನು ನೇಮಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT