ಪಂಚತಂತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಟಾಲಿವುಡ್ ನಲ್ಲೂ 'ಪಂಚತಂತ್ರ' ಚಿತ್ರೀಕರಣಕ್ಕೆ ಸಿದ್ಧತೆ

ಕಳೆದ ವಾರ ಬಿಡುಗಡೆಯಾದ ಯೋಗರಾಜ್ ಭಟ್ ನಿರ್ದೇಶನದ ರೋಮ್ಯಾಂಟಿಕ್ ಡ್ರಾಮ ಪಂಚತಂತ್ರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಐಪಿಎಲ್, ಚುನಾವಣಾ ಸಂದರ್ಭದಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಕಳೆದ ವಾರ ಬಿಡುಗಡೆಯಾದ ಯೋಗರಾಜ್ ಭಟ್ ನಿರ್ದೇಶನದ ರೋಮ್ಯಾಂಟಿಕ್ ಡ್ರಾಮ ಪಂಚತಂತ್ರ  ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಐಪಿಎಲ್, ಚುನಾವಣಾ ಸಂದರ್ಭದಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ವಿಹಾನ್, ಸೊನಾಲ್ ಮಾಂಟೆರೋ  ಮತ್ತು ರಂಗಾಯಣ ರಘು ಮೊದಲಾದವರು ನಟಿಸಿರುವ ಪಂಚತಂತ್ರದ ಸೆಕೆಂಡ್ ಹಾಪ್ ನಲ್ಲಿ ಮಂಡ್ಯ ರಾಜಕೀಯಕ್ಕೆ ಹೋಲಿಸಲಾಗಿದೆ ಎಂಬ ಚರ್ಚೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿದೆ.

ಆದಾಗ್ಯೂ, ಮನರಂಜನೆ ಒದಗಿಸುವ ನಿಟ್ಟಿನಲ್ಲಿ ಚಿತ್ರ ಮಾಡಿರುವುದಾಗಿ ನಿರ್ದೇಶಕರು ಸ್ಪಷ್ಪಪಡಿಸಿದ್ದಾರೆ.  ಚಿತ್ರದಲ್ಲಿನ ಅಂಶಗಳು ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಅಭ್ಯರ್ಥಿಯನ್ನು ಬೆಂಬಲಿಸುವವರಿಗೆ ಸಂಬಂಧಿಸಿಲ್ಲ ಎಂದು ಅವರು ಹೇಳಿದ್ದಾರೆ. ಹರಿಪ್ರಸಾದ್ ಜಯಣ್ಣ ಹಾಗೂ ಹೇಮಂತ್ ಪಾರದ್ಕರ್  ನಿರ್ಮಾಣದ ಈ ಚಿತ್ರಕ್ಕೆ ವಿ, ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಚಿತ್ರದ ಯಶಸ್ಸಿನಿಂದ ಉತ್ಸಾಹಗೊಂಡಿರುವ ಚಿತ್ರ ತಂಡ ತೆಲುಗಿನಲ್ಲೂ ಚಿತ್ರ ನಿರ್ಮಿಸುತ್ತಿದೆ. ಆಂಧ್ರ v/s ತೆಲಂಗಾಣ ಎಂದು ಈ ಚಿತ್ರಕ್ಕೆ ಹೆಸರಿಡಲಾಗುತ್ತಿದೆ .ಆಂಧ್ರದ ನಿರ್ಮಾಪಕರಾದ ಅಶ್ವಿನಿ ದತ್ ಮತ್ತು ಸ್ವಪ್ನ ದತ್ ಪಂಚತಂತ್ರ  ಚಿತ್ರ ವೀಕ್ಷಿಸಿದ್ದು, ತೆಲುಗು ಹಾಗೂ ಹಿಂದಿ ಆವೃತ್ತಿಯಲ್ಲಿ ಚಿತ್ರ ಮಾಡುವ ಚಿಂತನೆಯಲ್ಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಆದಾಗ್ಯೂ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT