ಬೆಂಗಳೂರು: ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಟ ಚೇತನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ 'ರಣಂ' ಚಿತ್ರದ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ ಅವರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. 'ರಣಂ'ನ ಪ್ರಮುಖ ಸನ್ನಿವೇಶದ ಶೂಟಿಂಗ್ ವೇಳೆ ಬೆಂಕಿಯ ದೃಶ್ಯಕ್ಕಾಗಿ ಸಿಲಿಂಡರ್ ಬಳಸಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ತಾಯಿ ಮತ್ತು ಮಗು ಮೃತಪಟ್ಟಿದ್ದರು. ಘಟನೆ ನಂತರ ಚಿತ್ರದ ನಿರ್ಮಾಪಕ ಶ್ರೀನಿವಾಸ ಅವರು ತಲೆಮರಿಸಿಕೊಂಡಿದ್ದರು.
ಇಂದು ಅವರನ್ನು ಬಾಗಲೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬಹು ತಾರಾಗಣದ ಈ ರಣಂ ಚಿತ್ರದಲ್ಲಿ ಚೇತನ್ ಮತ್ತು ಚಿರಂಜೀವಿ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಲನ್ ಅವತಾರದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಬಣ್ಣ ಹಚ್ಚಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos