ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟ; 'ರಣಂ' ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಬಂಧನ

ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಟ ಚೇತನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ 'ರಣಂ' ಚಿತ್ರದ ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ ಅವರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. 'ರಣಂ'ನ  ಪ್ರಮುಖ ಸನ್ನಿವೇಶದ ಶೂಟಿಂಗ್​ ವೇಳೆ ಬೆಂಕಿಯ ದೃಶ್ಯಕ್ಕಾಗಿ ಸಿಲಿಂಡರ್ ಬಳಸಿದ್ದರು. ಈ ವೇಳೆ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ತಾಯಿ ಮತ್ತು ಮಗು ಮೃತಪಟ್ಟಿದ್ದರು. ಘಟನೆ ನಂತರ ಚಿತ್ರದ ನಿರ್ಮಾಪಕ ಶ್ರೀನಿವಾಸ​ ಅವರು ತಲೆಮರಿಸಿಕೊಂಡಿದ್ದರು. 
ಇಂದು ಅವರನ್ನು ಬಾಗಲೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 
ಇನ್ನು ಬಹು ತಾರಾಗಣದ ಈ ರಣಂ ಚಿತ್ರದಲ್ಲಿ ಚೇತನ್‌ ಮತ್ತು ಚಿರಂಜೀವಿ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಲನ್ ಅವತಾರದಲ್ಲಿ ಬಾಲಿವುಡ್ ನಟ ಸಲ್ಮಾನ್‌ ಖಾನ್‌ ಸಹೋದರ ಅರ್ಬಾಜ್‌ ಖಾನ್‌ ಬಣ್ಣ ಹಚ್ಚಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT