ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟ; 'ರಣಂ' ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಬಂಧನ

ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಟ ಚೇತನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ 'ರಣಂ' ಚಿತ್ರದ ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ ಅವರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. 'ರಣಂ'ನ  ಪ್ರಮುಖ ಸನ್ನಿವೇಶದ ಶೂಟಿಂಗ್​ ವೇಳೆ ಬೆಂಕಿಯ ದೃಶ್ಯಕ್ಕಾಗಿ ಸಿಲಿಂಡರ್ ಬಳಸಿದ್ದರು. ಈ ವೇಳೆ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ತಾಯಿ ಮತ್ತು ಮಗು ಮೃತಪಟ್ಟಿದ್ದರು. ಘಟನೆ ನಂತರ ಚಿತ್ರದ ನಿರ್ಮಾಪಕ ಶ್ರೀನಿವಾಸ​ ಅವರು ತಲೆಮರಿಸಿಕೊಂಡಿದ್ದರು. 
ಇಂದು ಅವರನ್ನು ಬಾಗಲೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 
ಇನ್ನು ಬಹು ತಾರಾಗಣದ ಈ ರಣಂ ಚಿತ್ರದಲ್ಲಿ ಚೇತನ್‌ ಮತ್ತು ಚಿರಂಜೀವಿ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಲನ್ ಅವತಾರದಲ್ಲಿ ಬಾಲಿವುಡ್ ನಟ ಸಲ್ಮಾನ್‌ ಖಾನ್‌ ಸಹೋದರ ಅರ್ಬಾಜ್‌ ಖಾನ್‌ ಬಣ್ಣ ಹಚ್ಚಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT