ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟ; 'ರಣಂ' ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಬಂಧನ

ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಟ ಚೇತನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ 'ರಣಂ' ಚಿತ್ರದ ಶೂಟಿಂಗ್​ ವೇಳೆ ಸಿಲಿಂಡರ್​ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ ಅವರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. 'ರಣಂ'ನ  ಪ್ರಮುಖ ಸನ್ನಿವೇಶದ ಶೂಟಿಂಗ್​ ವೇಳೆ ಬೆಂಕಿಯ ದೃಶ್ಯಕ್ಕಾಗಿ ಸಿಲಿಂಡರ್ ಬಳಸಿದ್ದರು. ಈ ವೇಳೆ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ತಾಯಿ ಮತ್ತು ಮಗು ಮೃತಪಟ್ಟಿದ್ದರು. ಘಟನೆ ನಂತರ ಚಿತ್ರದ ನಿರ್ಮಾಪಕ ಶ್ರೀನಿವಾಸ​ ಅವರು ತಲೆಮರಿಸಿಕೊಂಡಿದ್ದರು. 
ಇಂದು ಅವರನ್ನು ಬಾಗಲೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 
ಇನ್ನು ಬಹು ತಾರಾಗಣದ ಈ ರಣಂ ಚಿತ್ರದಲ್ಲಿ ಚೇತನ್‌ ಮತ್ತು ಚಿರಂಜೀವಿ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಲನ್ ಅವತಾರದಲ್ಲಿ ಬಾಲಿವುಡ್ ನಟ ಸಲ್ಮಾನ್‌ ಖಾನ್‌ ಸಹೋದರ ಅರ್ಬಾಜ್‌ ಖಾನ್‌ ಬಣ್ಣ ಹಚ್ಚಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 world cup: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಆಂಗ್ಲರ ಮಣಿಸಿದ ಭಾರತ ಫೈನಲ್ಸ್ ಗೆ ಲಗ್ಗೆ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

SCROLL FOR NEXT