ರವೀಂದ್ರನಾಥ್ 
ಸಿನಿಮಾ ಸುದ್ದಿ

ಇವನು ರಾಮಾಚಾರಿ ಅಲ್ಲ, 'ಕಂಟ್ರಿ ಮೇಡ್ ಚಾರಿ' ಹೊಸ ಚಿತ್ರಕ್ಕೆ ರವೀಂದ್ರನಾಥ್ ಸಜ್ಜು!

ನಟ ರಮೇಶ್ ಅರವಿಂದ್ ಮತ್ತು ರಚಿತಾ ರಾಮ್ ಅಭಿನಯದ ಪುಷ್ಪಕ ವಿಮಾನ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ರವೀಂದ್ರನಾಥ್ ಅವರು ಎರಡು ವರ್ಷಗಳ ಬಳಿಕ ಕಂಟ್ರಿ ಮೇಡ್ ಚಾರಿ ಚಿತ್ರಕ್ಕೆ ಕೈ ಹಾಕಿದ್ದಾರೆ.

ನಟ ರಮೇಶ್ ಅರವಿಂದ್ ಮತ್ತು ರಚಿತಾ ರಾಮ್ ಅಭಿನಯದ ಪುಷ್ಪಕ ವಿಮಾನ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ರವೀಂದ್ರನಾಥ್ ಅವರು ಎರಡು ವರ್ಷಗಳ ಬಳಿಕ ಕಂಟ್ರಿ ಮೇಡ್ ಚಾರಿ ಚಿತ್ರಕ್ಕೆ ಕೈ ಹಾಕಿದ್ದಾರೆ.
ಪುಷ್ಪಕ ವಿಮಾನ ತಂದೆ ಮತ್ತು ಮಗಳ ಸಂಬಂಧ ಸಾರುವ ಭಾವನಾತ್ಮಕ ಚಿತ್ರವಾಗಿತ್ತು. ಆದರೆ ಕಂಟ್ರಿ ಮೇಡ್ ಚಾರಿ ಇದೊಂದು ಆಕ್ಷನ್-ಥ್ರಿಲ್ಲರ್ ಚಿತ್ರವಾಗಿದ್ದು ಇದರಲ್ಲಿ ತಂದೆ ಮತ್ತು ಮಗ ಸಂಬಂಧ ಕುರಿತಾಗಿದೆ. ಈ ಚಿತ್ರದ ಮೂಲಕ ಹೊಸಬರಿಗೆ ಅವಕಾಶ ನೀಡಲು ನಿರ್ದೇಶಕರು ತೀರ್ಮಾನಿಸಿದ್ದಾರೆ.
ಕಂಟ್ರಿ ಮೇಡ್ ಚಾರಿ ಚಿತ್ರ ಲೋಕಲ್ ಹುಡುಗನ ಜೀವನ ಕುರಿತಾಗಿರಲಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ರಾಘವಾ ಚಾರಿ. ಆದರೆ ಸ್ನೇಹಿತರಲ್ಲಿ ಚಾರಿ ಎಂದೇ ಗುರುತಿಸಿಕೊಂಡಿರುತ್ತಾನೆ. ಈ ಚಿತ್ರವನ್ನು ಕೆ ನಾಗರಾಜ್ ನಿರ್ಮಿಸುತ್ತಿದ್ದಾರೆ. ಮೇ ಅಂತ್ಯದೊಳಗೆ ಚಿತ್ರದ ತಾರಾಬಳಗವನ್ನು ಆಯ್ಕೆ ಮಾಡಲಾಗುವುದು ಎಂದು ನಿರ್ದೇಶಕ ರವೀಂದ್ರನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!