ರಾಜ್‍ಕುಮಾರ್ ಪುಣ್ಯಸ್ಮರಣೆ 
ಸಿನಿಮಾ ಸುದ್ದಿ

ವರನಟ ರಾಜ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್: ರಾಜ್‍ಕುಮಾರ್ ಪುಣ್ಯಸ್ಮರಣೆಯಂದು ರಾಘಣ್ಣ ಘೋಷಣೆ

ಇಂದು ಕನ್ನಡದದ ವರನಟ ಡಾ. ರಾಜ್‍ಕುಮಾರ್ ಪುಣ್ಯಸ್ಮರಣೆ. ಈ ದಿನ ರಾಜ್ ಕುಟುಂಬದ ಎಲ್ಲಾ ಸದಸ್ಯರೂ ಬೆಂಗಳುರು ಕಂಠೀರವ ಸ್ಟುಡಿಯೋದಲ್ಲಿನ ರಾಜ್ ಸಮಾಧಿಗೆ ಆಗಮಿಸಿ ಪೂಜೆ ಸಲಿಸಿದ್ದಾರೆ

ಬೆಂಗಳೂರು: ಇಂದು ಕನ್ನಡದದ ವರನಟ ಡಾ. ರಾಜ್‍ಕುಮಾರ್ ಪುಣ್ಯಸ್ಮರಣೆ. ಈ ದಿನ ರಾಜ್ ಕುಟುಂಬದ ಎಲ್ಲಾ ಸದಸ್ಯರೂ ಬೆಂಗಳುರು ಕಂಠೀರವ ಸ್ಟುಡಿಯೋದಲ್ಲಿನ ರಾಜ್ ಸಮಾಧಿಗೆ ಆಗಮಿಸಿ ಪೂಜೆ ಸಲಿಸಿದ್ದಾರೆ. ಈ ವೇಳೆ ಮಾತನಾಡಿದ ರಾಜ್‍ಕುಮಾರ್ ಪುತ್ರ ರಾಘವೇಂದ್ರ ರಾಜ್‍ಕುಮಾರ್ "ಅಪ್ಪಾಜಿಯ ಹುಟ್ಟುಹಬ್ಬವಾದ ಏ.24ರಂದು ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ನೀಡುತ್ತಿದ್ದೇವೆ" ಎಂದು ಘೋಷಿಸಿದ್ದಾರೆ.
ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಮೂವರೂ ಕುಟುಂಬ ಸಮೇತರಾಗಿ ಆಗಮಿಸಿ ತಂದೆ-ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. 
"ಏಪ್ರಿಲ್ ಬಂತೆಂದರೆ ರಾಜಣ್ಣನವರ ಮಾಸವಾಗಿದೆ.ಆ ದಿನ ನೆನೆದರೆ ಮೈ ಝುಂ ಎನ್ನುತ್ತದೆ. ಕಳೆದ ವರ್ಷ "ಅಮ್ಮನ ಮನೆ" ಚಿತ್ರಮಾಡಿ ಅಮ್ಮನಿಗೆ ಅರ್ಪಿಸಿದ್ದೆ, ಈ ಬಾರಿ "ಅಪ್ಪನ ಅಂಗಿ" ಚಿತ್ರ ಮಾಡಲಿದ್ದೇನೆ, ಇದನ್ನು ಅಪ್ಪಾಜಿಗೆ ಸಮರ್ಪಿಸಲಿದ್ದೇನೆ" ರಾಘವೇಂದ್ರ ರಾಜ್‍ಕುಮಾರ್ ಹೇಳಿದ್ದಾರೆ.
"ಮಾಧ್ಯಮದವರ ಜತೆ ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ" ಎಂದು ಅವರು ಹೇಲೀದರು.
"ಕಳೆದ ಎರಡು ವರ್ಷಗಳಿಂಡ ನನ್ನ ದೇಹದ ಒಂದು ಬಾಗ ಕೆಲಸ ಮಾಡುತ್ತಿಲ್ಲ, ಆದರೆ ಅಪ್ಪಾಜಿ ಆಶೀರ್ವಾದದಿಂಡ ಮೂರು ಚಿತ್ರಗಳನ್ನು ಮಾಡುತ್ತಿದ್ದೇನೆ"
"ಈವರೆಗೆ ನಾವು ಅಣ್ಣತಮ್ಮಂದಿರು ಮೂವರೂ ಒಟ್ತಾಗಿ ಚಿತ್ರವೊಂದರಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಅಂತಹಾ ಒಂದು ಚಿತ್ರ ಮಾಡುವುದು ಖಚಿತ, ಶಿವಣ್ಣ, ನಾನು ಹಾಗೂ ಅಪ್ಪು ಮೂವರೂ ಒಟ್ತಾಗಿ ತೆರೆ ಮೇಲೆ ಕಾಣಿಸಿಕೊಳ್ಲಬೇಕಿದೆ, ಅದಕ್ಕಾಗಿ ಉತ್ತಮ ಕತೆ ಹುಡುಕಾಟ ನಡೆಸಿದ್ದೇನೆ. ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ..
ನಟ ಪುನೀತ್ ರಾಜ್‍ಕುಮಾರ್ ಮಾತನಾಡಿ "ನನಗೆ ಅಪ್ಪನ ಅಂಗಿ ಎಂದರೆ ಬಿಳಿ ಬಣ್ಣ ನೆನಪಾಗುತ್ತದೆ. ಅವರು ಆ ಬಣ್ಣ ಬಿಟ್ಟು ಬೇರೆ ಧರಿಸುತ್ತಿರಲಿಲ್ಲ. ಅಲ್ಲದೆ ಜಾಸ್ತಿ ಬೆಲೆ ಬಾಳುವ ಬಟ್ಟೆ, ವಸ್ತುಗಳನ್ನು ಬಳಸುತ್ತಿರಲಿಲ್ಲ" ಎಂದರು. :ಅಪ್ಪಾಜಿ ಕುರಿತು ಬಯೋಪಿಕ್ ಮಾಡೋದು ಬಹಳ ಕಷ್ತ" ಎಂದು ಪುನೀತ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

SCROLL FOR NEXT